<p><strong>ತುಮಕೂರು</strong>: ಆಗಸ್ಟ್ ತಿಂಗಳ ಒಳಗೆ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯ ಕೆಲಸ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರಿಗಳ ಜತೆ ಸಭೆ ನಡೆಸಿದರು.</p>.<p>ಎತ್ತಿನಹೊಳೆ ಯೋಜನೆಗಾಗಿ ಈವರೆಗೂ 2,679 ಎಕರೆ ಭೂಸ್ವಾಧೀನವಾಗಿದೆ. ಉಳಿದ 438 ಎಕರೆ ಭೂಮಿಯನ್ನು 4 ತಿಂಗಳಲ್ಲಿ ಸ್ವಾಧೀನ ಪಡಿಸಿಕೊಳ್ಳಬೇಕು. ತುಮಕೂರು-ರಾಯದುರ್ಗ ಯೋಜನೆಗಾಗಿ 1,361 ಎಕರೆಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಬಾಕಿ 35 ಎಕರೆ ಭೂಸ್ವಾಧೀನ ಪ್ರಕ್ರಿಯೆ 45 ದಿನದಲ್ಲಿ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.</p>.<p>ವಿಶೇಷ ಭೂಸ್ವಾಧೀನಾಧಿಕಾರಿ ರೇಣುಕಾ ಪ್ರಸಾದ್ ಜಂಬಗಿ, ‘ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ 770 ಎಕರೆ ಭೂಮಿ ಹಸ್ತಾಂತರಿಸಲಾಗಿದೆ. ಶಿರಾ ಮತ್ತು ತುಮಕೂರು ತಾಲ್ಲೂಕಿನಲ್ಲಿ 61 ಎಕರೆ ಭೂಮಿ ಸ್ವಾಧೀನ ಆಗಬೇಕಿದೆ. ಇದಕ್ಕಾಗಿ ₹20 ಕೋಟಿ ಅನುದಾನದ ಅವಶ್ಯಕತೆಯಿದೆ’ ಎಂದು ತಿಳಿಸಿದರು.</p>.<p>ಭದ್ರಾ ಮೇಲ್ದಂಡೆ ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂದೇಶ್, ‘ಯೋಜನೆಗಾಗಿ ಸ್ವಾಧೀನ ಪಡಿಸಿಕೊಂಡ 308 ಎಕರೆ ಭೂ ಮಾಲೀಕರಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ’ ಎಂದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಗೌರವ್ಕುಮಾರ್ ಶೆಟ್ಟಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಆಗಸ್ಟ್ ತಿಂಗಳ ಒಳಗೆ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯ ಕೆಲಸ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರಿಗಳ ಜತೆ ಸಭೆ ನಡೆಸಿದರು.</p>.<p>ಎತ್ತಿನಹೊಳೆ ಯೋಜನೆಗಾಗಿ ಈವರೆಗೂ 2,679 ಎಕರೆ ಭೂಸ್ವಾಧೀನವಾಗಿದೆ. ಉಳಿದ 438 ಎಕರೆ ಭೂಮಿಯನ್ನು 4 ತಿಂಗಳಲ್ಲಿ ಸ್ವಾಧೀನ ಪಡಿಸಿಕೊಳ್ಳಬೇಕು. ತುಮಕೂರು-ರಾಯದುರ್ಗ ಯೋಜನೆಗಾಗಿ 1,361 ಎಕರೆಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಬಾಕಿ 35 ಎಕರೆ ಭೂಸ್ವಾಧೀನ ಪ್ರಕ್ರಿಯೆ 45 ದಿನದಲ್ಲಿ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.</p>.<p>ವಿಶೇಷ ಭೂಸ್ವಾಧೀನಾಧಿಕಾರಿ ರೇಣುಕಾ ಪ್ರಸಾದ್ ಜಂಬಗಿ, ‘ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ 770 ಎಕರೆ ಭೂಮಿ ಹಸ್ತಾಂತರಿಸಲಾಗಿದೆ. ಶಿರಾ ಮತ್ತು ತುಮಕೂರು ತಾಲ್ಲೂಕಿನಲ್ಲಿ 61 ಎಕರೆ ಭೂಮಿ ಸ್ವಾಧೀನ ಆಗಬೇಕಿದೆ. ಇದಕ್ಕಾಗಿ ₹20 ಕೋಟಿ ಅನುದಾನದ ಅವಶ್ಯಕತೆಯಿದೆ’ ಎಂದು ತಿಳಿಸಿದರು.</p>.<p>ಭದ್ರಾ ಮೇಲ್ದಂಡೆ ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂದೇಶ್, ‘ಯೋಜನೆಗಾಗಿ ಸ್ವಾಧೀನ ಪಡಿಸಿಕೊಂಡ 308 ಎಕರೆ ಭೂ ಮಾಲೀಕರಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ’ ಎಂದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಗೌರವ್ಕುಮಾರ್ ಶೆಟ್ಟಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>