<p><strong>ತುಮಕೂರು:</strong> ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ, ಲೈಂಗಿಕ ಶೋಷಣೆ ತಡೆಯುವ ಹೊಣೆ ಸಮಾಜದ ಪ್ರತಿಯೊಬ್ಬರ ಮೇಲೂ ಇದೆ’ ಎಂದು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಧರ್ ಹೇಳಿದರು.</p>.<p>ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು.</p>.<p>ಮೊದಲ ಇಬ್ಬರು ಹೆಣ್ಣುಮಕ್ಕಳಿಗೆ 18 ವರ್ಷ ತುಂಬಿದ ಮೇಲೆ ಸರ್ಕಾರದಿಂದ ₹ 1 ಲಕ್ಷ ಭಾಗ್ಯ ಲಕ್ಷ್ಮಿ ಬಾಂಡ್ನ್ನು ಫಲಾನುಭವಿಗಳಿಗೆ ನೀಡಲಾಗುವುದು. ಹೆಣ್ಣು ಮಗು 8ನೇ ತರಗತಿಯವರೆಗೆ ಅಂಗೀಕೃತ ಶಾಲೆಗಳಲ್ಲಿ ಕಡ್ಡಾಯವಾಗಿ ಶಿಕ್ಷಣ ಪಡೆದರೆ ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗುತ್ತಾರೆ. ಮಗುವಿನ ತಂದೆ, ತಾಯಿ ಸಮೀಪದ ಅಂಗನವಾಡಿ ಕೇಂದ್ರಗಳಲ್ಲಿ ಅರ್ಜಿ ಪಡೆದು ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ತಾಯಿ ಮಗು ಭಾವಚಿತ್ರ ಸೇರಿದಂತೆ ಕೆಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಮಾಹಿತಿ ಮಾಡಿದರು.</p>.<p>ಮಹಿಳಾ ದೌರ್ಜನ್ಯ ಪ್ರಕರಣಗಳು ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.</p>.<p>ಮಕ್ಕಳ ರಕ್ಷಣಾಧಿಕಾರಿ ಗೌತಮ್ ಮಾತನಾಡಿ, ‘ದೌರ್ಜನ್ಯಕ್ಕೊಳಗಾದ ಮಕ್ಕಳನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಲಾಗುವುದು. ಮಕ್ಕಳ ಪಾಲನೆ ಹಾಗೂ ಪೋಷಣೆ ಇಲಾಖೆಯ ಜವಾಬ್ದಾರಿಯಾಗಿರುತ್ತದೆ’ ಎಂದು ಹೇಳಿದರು.</p>.<p>ಕುಟುಂಬದಿಂದ ಹೊರಗುಳಿದ ಮಕ್ಕಳು, ಬಡತನದಿಂದ ಶಾಲೆಯಿಂದ ಹೊರಗುಳಿದ ಮಕ್ಕಳು, ಬಾಲ್ಯ ವಿವಾಹವಾಗಿರುವ ಮಕ್ಕಳು, ಎಲ್ಲ ಮಕ್ಕಳಿಗೂ ಬಾಲ ಮಂದಿರದಿಂದ ಉಚಿತ ಶಿಕ್ಷಣ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಬಾಲಮಂದಿರದಲ್ಲಿ ಒಟ್ಟು 7 ಬಾಲಕರು ಹಾಗೂ 40 ಬಾಲಕಿಯರು ಶಿಕ್ಷಣ ಪಡೆಯುತ್ತಿದ್ದಾರೆ. ಎಸ್ಸೆಎಸ್ಸೆಲ್ಸಿ ಅನುತ್ತೀರ್ಣರಾದ ಮಕ್ಕಳಿಗೆ ಬೆಂಗಳೂರಿನ ಅಪ್ಸಾ ಸಂಸ್ಥೆಯಿಂದ ವೃತ್ತಿಪರ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯೆ ರೇಣುಕಮ್ಮ, ತಾಲ್ಲೂಕು ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ಬಿಇಓ ರಂಗಧಾಮಪ್ಪ,ಆರೋಗ್ಯಾಧಿಕಾರಿ ಡಾ. ಶರತ್ಬಾಬು, ಸಾಂತ್ವನ ಕೇಂದ್ರದ ಸಮಾಜ ಕಾರ್ಯಕರ್ತೆ ಹಸಿನಬಾನು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ, ಲೈಂಗಿಕ ಶೋಷಣೆ ತಡೆಯುವ ಹೊಣೆ ಸಮಾಜದ ಪ್ರತಿಯೊಬ್ಬರ ಮೇಲೂ ಇದೆ’ ಎಂದು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಧರ್ ಹೇಳಿದರು.</p>.<p>ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು.</p>.<p>ಮೊದಲ ಇಬ್ಬರು ಹೆಣ್ಣುಮಕ್ಕಳಿಗೆ 18 ವರ್ಷ ತುಂಬಿದ ಮೇಲೆ ಸರ್ಕಾರದಿಂದ ₹ 1 ಲಕ್ಷ ಭಾಗ್ಯ ಲಕ್ಷ್ಮಿ ಬಾಂಡ್ನ್ನು ಫಲಾನುಭವಿಗಳಿಗೆ ನೀಡಲಾಗುವುದು. ಹೆಣ್ಣು ಮಗು 8ನೇ ತರಗತಿಯವರೆಗೆ ಅಂಗೀಕೃತ ಶಾಲೆಗಳಲ್ಲಿ ಕಡ್ಡಾಯವಾಗಿ ಶಿಕ್ಷಣ ಪಡೆದರೆ ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗುತ್ತಾರೆ. ಮಗುವಿನ ತಂದೆ, ತಾಯಿ ಸಮೀಪದ ಅಂಗನವಾಡಿ ಕೇಂದ್ರಗಳಲ್ಲಿ ಅರ್ಜಿ ಪಡೆದು ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ತಾಯಿ ಮಗು ಭಾವಚಿತ್ರ ಸೇರಿದಂತೆ ಕೆಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಮಾಹಿತಿ ಮಾಡಿದರು.</p>.<p>ಮಹಿಳಾ ದೌರ್ಜನ್ಯ ಪ್ರಕರಣಗಳು ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.</p>.<p>ಮಕ್ಕಳ ರಕ್ಷಣಾಧಿಕಾರಿ ಗೌತಮ್ ಮಾತನಾಡಿ, ‘ದೌರ್ಜನ್ಯಕ್ಕೊಳಗಾದ ಮಕ್ಕಳನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಲಾಗುವುದು. ಮಕ್ಕಳ ಪಾಲನೆ ಹಾಗೂ ಪೋಷಣೆ ಇಲಾಖೆಯ ಜವಾಬ್ದಾರಿಯಾಗಿರುತ್ತದೆ’ ಎಂದು ಹೇಳಿದರು.</p>.<p>ಕುಟುಂಬದಿಂದ ಹೊರಗುಳಿದ ಮಕ್ಕಳು, ಬಡತನದಿಂದ ಶಾಲೆಯಿಂದ ಹೊರಗುಳಿದ ಮಕ್ಕಳು, ಬಾಲ್ಯ ವಿವಾಹವಾಗಿರುವ ಮಕ್ಕಳು, ಎಲ್ಲ ಮಕ್ಕಳಿಗೂ ಬಾಲ ಮಂದಿರದಿಂದ ಉಚಿತ ಶಿಕ್ಷಣ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಬಾಲಮಂದಿರದಲ್ಲಿ ಒಟ್ಟು 7 ಬಾಲಕರು ಹಾಗೂ 40 ಬಾಲಕಿಯರು ಶಿಕ್ಷಣ ಪಡೆಯುತ್ತಿದ್ದಾರೆ. ಎಸ್ಸೆಎಸ್ಸೆಲ್ಸಿ ಅನುತ್ತೀರ್ಣರಾದ ಮಕ್ಕಳಿಗೆ ಬೆಂಗಳೂರಿನ ಅಪ್ಸಾ ಸಂಸ್ಥೆಯಿಂದ ವೃತ್ತಿಪರ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯೆ ರೇಣುಕಮ್ಮ, ತಾಲ್ಲೂಕು ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ಬಿಇಓ ರಂಗಧಾಮಪ್ಪ,ಆರೋಗ್ಯಾಧಿಕಾರಿ ಡಾ. ಶರತ್ಬಾಬು, ಸಾಂತ್ವನ ಕೇಂದ್ರದ ಸಮಾಜ ಕಾರ್ಯಕರ್ತೆ ಹಸಿನಬಾನು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>