<p><strong>ತುಮಕೂರು</strong>: ಎಲ್ಲರ ನಿರೀಕ್ಷೆಗಳನ್ನು ಈಡೇರಿಸಲು ಸರ್ಕಾರದಿಂದ ಸಾಧ್ಯವಿಲ್ಲ. ಒಂದು ಪರಿಹರಿಸಿದರೆ ಮತ್ತೊಂದು ಹೊಸ ಸಮಸ್ಯೆ ಉದ್ಬವವಾಗುತ್ತಲೇ ಇರುತ್ತದೆ. ಅವುಗಳನ್ನು ಎಚ್ಚರಿಕೆಯಿಂದ ನಿಭಾಯಿಸಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಬಿಜೆಪಿ ಕಾರ್ಯಕರ್ತರಿಗೆ ಸಲಹೆ ಮಾಡಿದರು.</p>.<p>ಬಿಜೆಪಿ ನಗರ ಮಂಡಲದ ಕಾರ್ಯಕಾರಿಣಿ ಸಭೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ‘ವಿರೋಧ ಪಕ್ಷಗಳ ಟೀಕೆಗೆ ಉತ್ತರ ನೀಡುವುದಕ್ಕೆ ಕಾರ್ಯಕರ್ತರು ಸೀಮಿತವಾಗಬಾರದು. ಸಂಕಷ್ಟದಲ್ಲಿರುವ ಜನರಿಗೆ ತಮ್ಮ ಕೈಲಾದಷ್ಟು ನೆರವು ನೀಡುವ ಮೂಲಕ ಪಕ್ಷದ ಘನತೆ ಹೆಚ್ಚಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸಬೇಕು. ಸರ್ಕಾರ– ಪಕ್ಷ ಒಟ್ಟಾಗಿ ಸಾಗಬೇಕು. ಪ್ರಧಾನಿಯಾಗಿದ್ದಾಗ ವಾಜಪೇಯಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ 2004ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲಬೇಕಾಯಿತು. ಸರ್ಕಾರದ ಕಾರ್ಯಕ್ರಮಗಳು ಜನರ ನಡುವೆ ಪ್ರಚಾರವಾಗಲಿಲ್ಲ ಎಂದು ಹೇಳಿದರು.</p>.<p>ಶಾಸಕ ಜಿ.ಬಿ.ಜೋತಿಗಣೇಶ್, ‘ಕೋವಿಡ್ನಿಂದಾಗಿ ಜನರ ಹೊಟ್ಟೆಪಾಡಿನ ಸ್ಥಿತಿ ಗಂಭೀರವಾಗಿದೆ. ಎರಡನೇ ಅಲೆ ಸಮಯದಲ್ಲಿ ಪಕ್ಷದ ಕಾರ್ಯಕರ್ತರು ಜನರ ಸಂಕಷ್ಟಗಳಿಗೆ ಸ್ಪಂದಿಸಿದರು’ ಎಂದರು.</p>.<p>1950ರಲ್ಲಿ ಜನಸಂಘ ಆರಂಭವಾದಾಗ ಇದ್ದಂತಹಧ್ಯೇಯೋದ್ದೇಶಗಳನ್ನೇ ಇಂದಿಗೂ ಬಿಜೆಪಿ ಮುಂದುವರೆಸಿಕೊಂಡು ಬಂದಿದೆ. ರಾಜ್ಯದಲ್ಲಿ ಇಬ್ಬರು ಶಾಸಕರು ಆಯ್ಕೆಯಾದ ಸನ್ನಿವೇಶದಿಂದ ಹಿಡಿದು, ಅಧಿಕಾರ ಹಿಡಿಯುವ ಮಟ್ಟಕ್ಕೆ ಪಕ್ಷ ಬೆಳೆದು ನಿಂತಿದೆ ಎಂದು ತಿಳಿಸಿದರು.</p>.<p>ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಿವಪ್ರಸಾದ್, ‘ಪಕ್ಷವನ್ನು ಸದಾ ಜೀವಂತವಾಗಿಡಲು ಇಂತಹ ಕಾರ್ಯಕಾರಿಣಿ ಸಭೆಗಳು ಅನಿವಾರ್ಯ. ಪಕ್ಷ ವಹಿಸಿದ ಜವಾಬ್ದಾರಿಗಳನ್ನು ನಿರ್ಲಕ್ಷ್ಯಿಸಿದರೆ, ಪಕ್ಷ ನಮ್ಮನ್ನು ನಿರ್ಲಕ್ಷ್ಯಿಸುತ್ತದೆ ಎಂಬುದಕ್ಕೆ ನಮ್ಮ ನಡುವೆ ಹಲವಾರು ಉದಾಹರಣೆಗಳಿವೆ’ ಎಂದು ಹೇಳಿದರು.</p>.<p>ತುಮಕೂರು ನಗರ ಮಂಡಲ ಅಧ್ಯಕ್ಷ ಹನುಮಂತರಾಜು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್, ದಾವಣಗೆರೆ ಉಪಪ್ರಭಾರ ಲಕ್ಷ್ಮಿಶ್, ಮೇಯರ್ ಬಿ.ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಎಲ್ಲರ ನಿರೀಕ್ಷೆಗಳನ್ನು ಈಡೇರಿಸಲು ಸರ್ಕಾರದಿಂದ ಸಾಧ್ಯವಿಲ್ಲ. ಒಂದು ಪರಿಹರಿಸಿದರೆ ಮತ್ತೊಂದು ಹೊಸ ಸಮಸ್ಯೆ ಉದ್ಬವವಾಗುತ್ತಲೇ ಇರುತ್ತದೆ. ಅವುಗಳನ್ನು ಎಚ್ಚರಿಕೆಯಿಂದ ನಿಭಾಯಿಸಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಬಿಜೆಪಿ ಕಾರ್ಯಕರ್ತರಿಗೆ ಸಲಹೆ ಮಾಡಿದರು.</p>.<p>ಬಿಜೆಪಿ ನಗರ ಮಂಡಲದ ಕಾರ್ಯಕಾರಿಣಿ ಸಭೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ‘ವಿರೋಧ ಪಕ್ಷಗಳ ಟೀಕೆಗೆ ಉತ್ತರ ನೀಡುವುದಕ್ಕೆ ಕಾರ್ಯಕರ್ತರು ಸೀಮಿತವಾಗಬಾರದು. ಸಂಕಷ್ಟದಲ್ಲಿರುವ ಜನರಿಗೆ ತಮ್ಮ ಕೈಲಾದಷ್ಟು ನೆರವು ನೀಡುವ ಮೂಲಕ ಪಕ್ಷದ ಘನತೆ ಹೆಚ್ಚಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸಬೇಕು. ಸರ್ಕಾರ– ಪಕ್ಷ ಒಟ್ಟಾಗಿ ಸಾಗಬೇಕು. ಪ್ರಧಾನಿಯಾಗಿದ್ದಾಗ ವಾಜಪೇಯಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ 2004ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲಬೇಕಾಯಿತು. ಸರ್ಕಾರದ ಕಾರ್ಯಕ್ರಮಗಳು ಜನರ ನಡುವೆ ಪ್ರಚಾರವಾಗಲಿಲ್ಲ ಎಂದು ಹೇಳಿದರು.</p>.<p>ಶಾಸಕ ಜಿ.ಬಿ.ಜೋತಿಗಣೇಶ್, ‘ಕೋವಿಡ್ನಿಂದಾಗಿ ಜನರ ಹೊಟ್ಟೆಪಾಡಿನ ಸ್ಥಿತಿ ಗಂಭೀರವಾಗಿದೆ. ಎರಡನೇ ಅಲೆ ಸಮಯದಲ್ಲಿ ಪಕ್ಷದ ಕಾರ್ಯಕರ್ತರು ಜನರ ಸಂಕಷ್ಟಗಳಿಗೆ ಸ್ಪಂದಿಸಿದರು’ ಎಂದರು.</p>.<p>1950ರಲ್ಲಿ ಜನಸಂಘ ಆರಂಭವಾದಾಗ ಇದ್ದಂತಹಧ್ಯೇಯೋದ್ದೇಶಗಳನ್ನೇ ಇಂದಿಗೂ ಬಿಜೆಪಿ ಮುಂದುವರೆಸಿಕೊಂಡು ಬಂದಿದೆ. ರಾಜ್ಯದಲ್ಲಿ ಇಬ್ಬರು ಶಾಸಕರು ಆಯ್ಕೆಯಾದ ಸನ್ನಿವೇಶದಿಂದ ಹಿಡಿದು, ಅಧಿಕಾರ ಹಿಡಿಯುವ ಮಟ್ಟಕ್ಕೆ ಪಕ್ಷ ಬೆಳೆದು ನಿಂತಿದೆ ಎಂದು ತಿಳಿಸಿದರು.</p>.<p>ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಿವಪ್ರಸಾದ್, ‘ಪಕ್ಷವನ್ನು ಸದಾ ಜೀವಂತವಾಗಿಡಲು ಇಂತಹ ಕಾರ್ಯಕಾರಿಣಿ ಸಭೆಗಳು ಅನಿವಾರ್ಯ. ಪಕ್ಷ ವಹಿಸಿದ ಜವಾಬ್ದಾರಿಗಳನ್ನು ನಿರ್ಲಕ್ಷ್ಯಿಸಿದರೆ, ಪಕ್ಷ ನಮ್ಮನ್ನು ನಿರ್ಲಕ್ಷ್ಯಿಸುತ್ತದೆ ಎಂಬುದಕ್ಕೆ ನಮ್ಮ ನಡುವೆ ಹಲವಾರು ಉದಾಹರಣೆಗಳಿವೆ’ ಎಂದು ಹೇಳಿದರು.</p>.<p>ತುಮಕೂರು ನಗರ ಮಂಡಲ ಅಧ್ಯಕ್ಷ ಹನುಮಂತರಾಜು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್, ದಾವಣಗೆರೆ ಉಪಪ್ರಭಾರ ಲಕ್ಷ್ಮಿಶ್, ಮೇಯರ್ ಬಿ.ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>