ಶುಕ್ರವಾರ ರಾತ್ರಿ ಮನೆಯ ಅಂಗಡಿಯಲ್ಲಿ ವಿದ್ಯುತ್ ಇಲ್ಲದಾಗ ಮೊಂಬತ್ತಿ ಹಚ್ಚಿ ಇಡಲಾಗಿತ್ತು. ಎದುರಿನಲ್ಲಿಯೇ ಬೈಕ್ಗೆ ಪೆಟ್ರೋಲ್ ಹಾಕುವಾಗ ತಕ್ಷಣ ವಿದ್ಯುತ್ ಬಂದಾಗ ಗಾಬರಿಗೊಂಡ ಸೌಂದರ್ಯ ಪೆಟ್ರೋಲ್ ಬಾಟಲಿ ಕೈ ಬಿಟ್ಟ ಕಾರಣ ಪೆಟ್ರೋಲ್ ಚೆಲ್ಲಿ ಮೇಣದಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಅಂಗಡಿ ಸಾಮಗ್ರಿ ಆಹುತಿಯಾಗಿತ್ತು. ಗಾಯಗೊಂಡಿದ್ದ ಸಾಂದರ್ಯ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.