<p>ತುಮಕೂರು: ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಹಾಗೂ ಅವರ ಪುತ್ರ, ಜಿಲ್ಲಾ ಸಂಘಟನಾ ಸಂಚಾಲಕ ಕುಂದೂರು ಮುರಳಿ ಅವರನ್ನು ಸಂಘಟನೆಯಿಂದ ಹೊರ ಹಾಕಲಾಗಿದೆ.</p>.<p>ಕೆಲವು ಗುರುತರ ಆರೋಪಗಳು ಕೇಳಿಬಂದ ನಂತರ ಸಂಘನೆಯ ಜವಾಬ್ದಾರಿಯಿಂದ ಕೈಬಿಟ್ಟು ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಆದೇಶಿಸಿದ್ದಾರೆ. ಹೊಸದಾಗಿ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿಯ ಬೆಲ್ಲದಮಡು ಕೃಷ್ಣಪ್ಪ ಅವರನ್ನು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.</p>.<p>ಸಂಘಟನೆ ರಾಜ್ಯ ನಾಯಕರನ್ನು ಅವಹೇಳನ ಮಾಡುತ್ತಿರುವುದು, ತುರುವೇಕೆರೆ ತಾಲ್ಲೂಕು ಪದಾಧಿಕಾರಿಗಳ ಆಯ್ಕೆ ಸಮಯದಲ್ಲಿ ಗಲಾಟೆ ಮತ್ತಿತರರ ವಿಚಾರಗಳನ್ನು ಮುಂದಿಟ್ಟುಕೊಂಡು ಕುಂದೂರು ತಿಮ್ಮಯ್ಯ, ಮುರಳಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ನೋಟಿಸ್ಗೆ ವಿವರ ನೀಡಿರಲಿಲ್ಲ. ಮಾರ್ಚ್ 24ರಂದು ನಡೆದ ಡಿಎಸ್ಎಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿದ್ದು, ಸಂಘಟನೆಯ ಜವಾಬ್ದಾರಿಯಿಂದ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.</p>.<p>ಕಳೆದ ನಾಲ್ಕು ದಶಕಗಳಿಂದ ಜಿಲ್ಲೆಯಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಕುಂದೂರು ತಿಮ್ಮಯ್ಯ ಮುನ್ನಡೆಸಿಕೊಂಡು ಬಂದಿದ್ದರು. ಸಂಘಟನೆಯನ್ನು ಸಾಕಷ್ಟು ಬಲಪಡಿಸಿ, ಹಲವಾರು ದಲಿತರ ಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ವರ್ಷ ಅವರ ಆತ್ಮ ಕಥನ ‘ಅಂಗುಲಿಮಾಲ’ ಕೃತಿ ಬಿಡುಗಡೆ ಮಾಡಲಾಗಿತ್ತು.</p>.<p>ನಗರದ ಜನ ಚಳವಳಿ ಕೇಂದ್ರದಲ್ಲಿ ಆಯೋಜಿಸಿದ್ದ ದಲಿತ ಮುಖಂಡರ ಸಭೆಯಲ್ಲಿ ತಿಮ್ಮಯ್ಯ ಅವರನ್ನು ಸಂಘನೆಯಿಂದ ಹೊರಗಿಟ್ಟಿರುವುದನ್ನು ಖಂಡಿಸಲಾಯಿತು. ಅವರ ನೇತೃತ್ವದಲ್ಲೇ ಮತ್ತೆ ಸಂಘಟನೆ ಬಲಪಡಿಸುವ ಬಗ್ಗೆ ಚರ್ಚಿಸಲಾಯಿತು. ಲೋಕಸಭೆ ಚುನಾವಣೆ ಮುಗಿದ ನಂತರ ಸಂಘಟನೆಗೆ ಒತ್ತುಕೊಡಲು ನಿರ್ಧರಿಸಲಾಯಿತು.</p>.<p>ಮುಖಂಡರಾದ ಡ್ಯಾಗೇರಹಳ್ಳಿ ವಿರೂಪಾಕ್ಷ, ಚೇಳೂರು ಶಿವನಂಜಪ್ಪ, ಕೆಂಟಲಗೆರೆ ಕೆ.ಎಚ್.ರಂಗನಾಥ್, ನೊಣವಿನಕೆರೆ ರಾಜಣ್ಣ, ಕುಪ್ಪೂರು ಶ್ರೀಧರನಾಯಕ್, ಲೋಕೇಶ್ ಸ್ವಾಮಿ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಹಾಗೂ ಅವರ ಪುತ್ರ, ಜಿಲ್ಲಾ ಸಂಘಟನಾ ಸಂಚಾಲಕ ಕುಂದೂರು ಮುರಳಿ ಅವರನ್ನು ಸಂಘಟನೆಯಿಂದ ಹೊರ ಹಾಕಲಾಗಿದೆ.</p>.<p>ಕೆಲವು ಗುರುತರ ಆರೋಪಗಳು ಕೇಳಿಬಂದ ನಂತರ ಸಂಘನೆಯ ಜವಾಬ್ದಾರಿಯಿಂದ ಕೈಬಿಟ್ಟು ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಆದೇಶಿಸಿದ್ದಾರೆ. ಹೊಸದಾಗಿ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿಯ ಬೆಲ್ಲದಮಡು ಕೃಷ್ಣಪ್ಪ ಅವರನ್ನು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.</p>.<p>ಸಂಘಟನೆ ರಾಜ್ಯ ನಾಯಕರನ್ನು ಅವಹೇಳನ ಮಾಡುತ್ತಿರುವುದು, ತುರುವೇಕೆರೆ ತಾಲ್ಲೂಕು ಪದಾಧಿಕಾರಿಗಳ ಆಯ್ಕೆ ಸಮಯದಲ್ಲಿ ಗಲಾಟೆ ಮತ್ತಿತರರ ವಿಚಾರಗಳನ್ನು ಮುಂದಿಟ್ಟುಕೊಂಡು ಕುಂದೂರು ತಿಮ್ಮಯ್ಯ, ಮುರಳಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ನೋಟಿಸ್ಗೆ ವಿವರ ನೀಡಿರಲಿಲ್ಲ. ಮಾರ್ಚ್ 24ರಂದು ನಡೆದ ಡಿಎಸ್ಎಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿದ್ದು, ಸಂಘಟನೆಯ ಜವಾಬ್ದಾರಿಯಿಂದ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.</p>.<p>ಕಳೆದ ನಾಲ್ಕು ದಶಕಗಳಿಂದ ಜಿಲ್ಲೆಯಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಕುಂದೂರು ತಿಮ್ಮಯ್ಯ ಮುನ್ನಡೆಸಿಕೊಂಡು ಬಂದಿದ್ದರು. ಸಂಘಟನೆಯನ್ನು ಸಾಕಷ್ಟು ಬಲಪಡಿಸಿ, ಹಲವಾರು ದಲಿತರ ಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ವರ್ಷ ಅವರ ಆತ್ಮ ಕಥನ ‘ಅಂಗುಲಿಮಾಲ’ ಕೃತಿ ಬಿಡುಗಡೆ ಮಾಡಲಾಗಿತ್ತು.</p>.<p>ನಗರದ ಜನ ಚಳವಳಿ ಕೇಂದ್ರದಲ್ಲಿ ಆಯೋಜಿಸಿದ್ದ ದಲಿತ ಮುಖಂಡರ ಸಭೆಯಲ್ಲಿ ತಿಮ್ಮಯ್ಯ ಅವರನ್ನು ಸಂಘನೆಯಿಂದ ಹೊರಗಿಟ್ಟಿರುವುದನ್ನು ಖಂಡಿಸಲಾಯಿತು. ಅವರ ನೇತೃತ್ವದಲ್ಲೇ ಮತ್ತೆ ಸಂಘಟನೆ ಬಲಪಡಿಸುವ ಬಗ್ಗೆ ಚರ್ಚಿಸಲಾಯಿತು. ಲೋಕಸಭೆ ಚುನಾವಣೆ ಮುಗಿದ ನಂತರ ಸಂಘಟನೆಗೆ ಒತ್ತುಕೊಡಲು ನಿರ್ಧರಿಸಲಾಯಿತು.</p>.<p>ಮುಖಂಡರಾದ ಡ್ಯಾಗೇರಹಳ್ಳಿ ವಿರೂಪಾಕ್ಷ, ಚೇಳೂರು ಶಿವನಂಜಪ್ಪ, ಕೆಂಟಲಗೆರೆ ಕೆ.ಎಚ್.ರಂಗನಾಥ್, ನೊಣವಿನಕೆರೆ ರಾಜಣ್ಣ, ಕುಪ್ಪೂರು ಶ್ರೀಧರನಾಯಕ್, ಲೋಕೇಶ್ ಸ್ವಾಮಿ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>