ಜಾತ್ರಾ ಮಹೋತ್ಸವ ಈಗಾಗಲೇ ಆರಂಭವಾಗಿದ್ದು, ಮಾರ್ಚ್ 29ರ ವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಜಾತ್ರೆಯ ವೇಳೆ ದೇವರಾಯನದುರ್ಗಕ್ಕೆ ಬರುವ ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ವಾಹನ ನಿಲುಗಡೆಗೆ ಕ್ರಮ ವಹಿಸಬೇಕು. ಬ್ರಹ್ಮ ರಥೋತ್ಸವಕ್ಕೆ ಸುಮಾರು 50 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದರು.