ತುಮಕೂರು: ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿ ವ್ಯಾಪ್ತಿಯ ಬಳಸಮುದ್ರ, ಕ್ಯಾತಗಾನಚೆರ್ಲು, ರಾಯಚೆರ್ಲು, ತಿರುಮಣಿ ಮತ್ತು ವಳ್ಳೂರು ಗ್ರಾಮ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಸೋಲಾರ್ ಪಾರ್ಕ್ಗೆ ರೈತರು ಜಮೀನುಗಳನ್ನು ನೀಡಿದ್ದಾರೆ. ಆ ಜಮೀನುಗಳ ಚೆಕ್ಬಂದಿ ಗುರುತಿಸಿ, ಸರ್ವೆ ನಂಬರ್ ಹಾಗೂ ರೈತನ ಹೆಸರನ್ನು ಒಳಗೊಂಡ ನಾಮಫಲಕ ಅಳವಡಿಸಬೇಕು ಎಂದು ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.