<p><strong>ತುಮಕೂರು: </strong>ಇತ್ತೀಚೆಗೆ ವಾಹನ ಖರೀದಿಸಲು ನಗರದ ಷೋ ರೂಂ ಒಂದಕ್ಕೆ ಭೇಟಿ ನೀಡಿದ್ದ ತಾಲ್ಲೂಕಿನ ರಾಮನಪಾಳ್ಯದ ರೈತ ಕೆಂಪೇಗೌಡ ಅವರನ್ನು ಷೋ ರೂಂ ಸಿಬ್ಬಂದಿ ಅವಮಾನಿಸಿದ ಪ್ರಕರಣ ಸದ್ಯ ಸುಖಾಂತ್ಯ ಕಂಡಿದ್ದು, ಯುವ ರೈತ ಅದೇ ಷೋ ರೂಂನಲ್ಲಿ ವಾಹನ ಖರೀದಿಸಿದ್ದಾರೆ.</p>.<p>ಈ ಕುರಿತು ಮಹೀಂದ್ರ ಚೇರ್ಮನ್ ಆನಂದ್ ಮಹೀಂದ್ರ ‘ಲೆಟ್ ಮಿ ಆ್ಯಡ್ ಮೈ ವೆಲ್ಕಮ್ ಟು ಕೆಂಪೇಗೌಡ’ ಎಂದು ಟ್ವೀಟ್ ಮಾಡುವ ಮೂಲಕ ಮಹೀಂದ್ರ ಕುಟುಂಬಕ್ಕೆ ಕೆಂಪೇಗೌಡ ಅವರನ್ನು<br />ಸ್ವಾಗತಿಸಿದ್ದಾರೆ.</p>.<p>ಜ.21ರಂದು ನಗರದ ಷೊ ರೂಂ ಗೆ ವಾಹನ ಖರೀದಿಸಲು ಬಂದಿದ್ದ ರೈತ ಕೆಂಪೇಗೌಡ ಮತ್ತು ಅವರ ಸ್ನೇಹಿತರನ್ನು ಅವರ ವೇಷಭೂಷಣ ನೋಡಿ, ಷೋ ರೂಂ ಸಿಬ್ಬಂದಿ ನಿನಗೆ ₹10 ಕೊಡೋಕೆ ಆಗಲ್ಲ, ಕಾರ್ ಕೊಳ್ಳುವ ಯೋಗ್ಯತೆ ನಿನಗಿಲ್ಲ ಎಂದು ಅವಮಾನಿಸಿ ವಾಪಸ್ ಕಳುಹಿಸಿದ್ದರು. ಘಟನೆ ನಡೆದ ಅರ್ಧ ಗಂಟೆಯೊಳಗೆ ಕೆಂಪೇಗೌಡ ₹10 ಲಕ್ಷ ಹಣವನ್ನು ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದ. ಆದರೆ ಷೋ ರೂಂ ಸಿಬ್ಬಂದಿ ದೊಡ್ಡ ಮೊತ್ತವನ್ನು ಒಮ್ಮೆಲೆ ಸ್ವೀಕರಿಸಲು ಸಾಧ್ಯವಿಲ್ಲ. ಹಾಗಾಗಿ ಕಾರ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.</p>.<p>ಇದರಿಂದ ಸಮಾಧಾನಗೊಳ್ಳದ ರೈತಕ್ಷಮೆಯಾಚಿಸುವಂತೆ ಪೊಲೀಸ್ ಠಾಣೆಯಮೆಟ್ಟಿಲು ಹತ್ತಿದ್ದರು. ಕೊನೆಗೆ ಷೋ ರೂಂ ಸಿಬ್ಬಂದಿ ಕ್ಷಮೆಯಾಚಿಸಿದ್ದರು. ಈ ಘಟನೆ ಎಲ್ಲೆಡೆ ವೈರಲ್ ಆಗಿತ್ತು. ಸದ್ಯ ಕೆಂಪೇಗೌಡ ಅದೇ ಷೊ ರೂಂ ನಲ್ಲಿ ಮಹೀಂದ್ರ ಬೊಲೆರೋ ಗೂಡ್ಸ್ ವಾಹನ ಖರೀದಿಸಿ ನಗೆ ಬೀರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಇತ್ತೀಚೆಗೆ ವಾಹನ ಖರೀದಿಸಲು ನಗರದ ಷೋ ರೂಂ ಒಂದಕ್ಕೆ ಭೇಟಿ ನೀಡಿದ್ದ ತಾಲ್ಲೂಕಿನ ರಾಮನಪಾಳ್ಯದ ರೈತ ಕೆಂಪೇಗೌಡ ಅವರನ್ನು ಷೋ ರೂಂ ಸಿಬ್ಬಂದಿ ಅವಮಾನಿಸಿದ ಪ್ರಕರಣ ಸದ್ಯ ಸುಖಾಂತ್ಯ ಕಂಡಿದ್ದು, ಯುವ ರೈತ ಅದೇ ಷೋ ರೂಂನಲ್ಲಿ ವಾಹನ ಖರೀದಿಸಿದ್ದಾರೆ.</p>.<p>ಈ ಕುರಿತು ಮಹೀಂದ್ರ ಚೇರ್ಮನ್ ಆನಂದ್ ಮಹೀಂದ್ರ ‘ಲೆಟ್ ಮಿ ಆ್ಯಡ್ ಮೈ ವೆಲ್ಕಮ್ ಟು ಕೆಂಪೇಗೌಡ’ ಎಂದು ಟ್ವೀಟ್ ಮಾಡುವ ಮೂಲಕ ಮಹೀಂದ್ರ ಕುಟುಂಬಕ್ಕೆ ಕೆಂಪೇಗೌಡ ಅವರನ್ನು<br />ಸ್ವಾಗತಿಸಿದ್ದಾರೆ.</p>.<p>ಜ.21ರಂದು ನಗರದ ಷೊ ರೂಂ ಗೆ ವಾಹನ ಖರೀದಿಸಲು ಬಂದಿದ್ದ ರೈತ ಕೆಂಪೇಗೌಡ ಮತ್ತು ಅವರ ಸ್ನೇಹಿತರನ್ನು ಅವರ ವೇಷಭೂಷಣ ನೋಡಿ, ಷೋ ರೂಂ ಸಿಬ್ಬಂದಿ ನಿನಗೆ ₹10 ಕೊಡೋಕೆ ಆಗಲ್ಲ, ಕಾರ್ ಕೊಳ್ಳುವ ಯೋಗ್ಯತೆ ನಿನಗಿಲ್ಲ ಎಂದು ಅವಮಾನಿಸಿ ವಾಪಸ್ ಕಳುಹಿಸಿದ್ದರು. ಘಟನೆ ನಡೆದ ಅರ್ಧ ಗಂಟೆಯೊಳಗೆ ಕೆಂಪೇಗೌಡ ₹10 ಲಕ್ಷ ಹಣವನ್ನು ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದ. ಆದರೆ ಷೋ ರೂಂ ಸಿಬ್ಬಂದಿ ದೊಡ್ಡ ಮೊತ್ತವನ್ನು ಒಮ್ಮೆಲೆ ಸ್ವೀಕರಿಸಲು ಸಾಧ್ಯವಿಲ್ಲ. ಹಾಗಾಗಿ ಕಾರ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.</p>.<p>ಇದರಿಂದ ಸಮಾಧಾನಗೊಳ್ಳದ ರೈತಕ್ಷಮೆಯಾಚಿಸುವಂತೆ ಪೊಲೀಸ್ ಠಾಣೆಯಮೆಟ್ಟಿಲು ಹತ್ತಿದ್ದರು. ಕೊನೆಗೆ ಷೋ ರೂಂ ಸಿಬ್ಬಂದಿ ಕ್ಷಮೆಯಾಚಿಸಿದ್ದರು. ಈ ಘಟನೆ ಎಲ್ಲೆಡೆ ವೈರಲ್ ಆಗಿತ್ತು. ಸದ್ಯ ಕೆಂಪೇಗೌಡ ಅದೇ ಷೊ ರೂಂ ನಲ್ಲಿ ಮಹೀಂದ್ರ ಬೊಲೆರೋ ಗೂಡ್ಸ್ ವಾಹನ ಖರೀದಿಸಿ ನಗೆ ಬೀರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>