ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಏಳು ಕೊಳವೆ ಬಾವಿ ಕೊರೆಸಿದರೂ ನೀರಿಲ್ಲ: ರೈತ ಆತ್ಮಹತ್ಯೆ

Published 6 ಮೇ 2024, 23:37 IST
Last Updated 6 ಮೇ 2024, 23:37 IST
ಅಕ್ಷರ ಗಾತ್ರ

ತೋವಿನಕೆರೆ (ತುಮಕೂರು): ಕೊಳವೆ ಬಾವಿ ಕೊರೆಸಲು ಲಕ್ಷಾಂತರ ರೂಪಾಯಿ ಕೈ ಸಾಲ ಮಾಡಿದ್ದ ರಾಜಣ್ಣ (38) ಎಂಬ ರೈತ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೋವಿನಕೆರೆ ಪಂಚಾಯಿತಿ ವ್ಯಾಪ್ತಿಯ ಚಿಕ್ಕಣ್ಣನಹಳ್ಳಿ ಜಮೀನಿನಲ್ಲಿ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ.

ಆರು ವರ್ಷದಲ್ಲಿ ಏಳು ಕೊಳವೆ ಬಾವಿ ಕೊರೆಸಿದ್ದರು. ಹತ್ತು ದಿನಗಳ ಅಂತರದಲ್ಲಿ ಎರಡು ಕೊಳವೆ ಬಾವಿ ಕೊರೆಸಿದ್ದು, ತೀರಾ ಕಡಿಮೆ ನೀರು ಬಂದಿದೆ. 

ಮೂರು ದಿನಗಳಿಂದ ಸಾಲ ನೀಡಿದ್ದ ವ್ಯಕ್ತಿಗಳು ಹಣ ಹಿಂದಿರುಗಿಸುವಂತೆ ಮನೆಗೆ ಬಂದು ಒತ್ತಡ ಹೇರಿದ್ದರು. ಕಂದಾಯ ಇಲಾಖೆಯ ರಶ್ಮಿ ಮಧು ಭೇಟಿ ನೀಡಿದ್ದರು. ಕೊರಟಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.

ನೀರು ಇಲ್ಲದೆ ಒಣಗಿರುವ ಅಡಿಕೆ ತೋಟ
ನೀರು ಇಲ್ಲದೆ ಒಣಗಿರುವ ಅಡಿಕೆ ತೋಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT