<p><strong>ತುರುವೇಕೆರೆ:</strong> ತಾಲ್ಲೂಕಿನ ಮಾಯಸಂದ್ರ ಹೋಬಳಿಯ ದೊಡ್ಡಮಾರ್ಗೋನಹಳ್ಳಿ ಗ್ರಾಮದ ರೈತ ಸಿದ್ದಯ್ಯ(90) ತೆಂಗಿನ ಸಸಿಗೆ ತಗುಲಿದ್ದ ಬೆಂಕಿ ನಂದಿಸುವಾಗ ಆಕಸ್ಮಿಕವಾಗಿ ಬೆಂಕಿ ಅವಪಘಡಕ್ಕೆ ತುತ್ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಸಿದ್ದಯ್ಯ ಭಾನುವಾರ ಸಂಜೆ ದೊಡ್ಡಮಾರ್ಗೋನಹಳ್ಳಿ ಹೊರ ವಲಯದ ತೋಟಕ್ಕೆ ತೆರಳಿದ್ದಾರೆ. ಬದುವಿನಲ್ಲಿದ್ದ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಬೆಂಕಿ ಕ್ರಮೇಣ ಬದುವಿನ ಪಕ್ಕದಲ್ಲಿದ್ದ ತೆಂಗಿನ ಸಸಿಗೆ ಆವರಿಸಿದೆ. ನಂದಿಸುವಾಗ ಸಿದ್ದಯ್ಯ ಅವರಿಗೂ ಬೆಂಕಿಯ ಜ್ವಾಲೆ ರಾಚಿದೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಅಕ್ಕಪಕ್ಕದ ತೋಟದವರು ಸಿದ್ದಯ್ಯ ಬೆಂಕಿಯಲ್ಲಿ ಬಿದ್ದಿರುವುದನ್ನು ಕಂಡು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಪಿಎಸ್ಐ ಸಂಗಮೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ತಾಲ್ಲೂಕಿನ ಮಾಯಸಂದ್ರ ಹೋಬಳಿಯ ದೊಡ್ಡಮಾರ್ಗೋನಹಳ್ಳಿ ಗ್ರಾಮದ ರೈತ ಸಿದ್ದಯ್ಯ(90) ತೆಂಗಿನ ಸಸಿಗೆ ತಗುಲಿದ್ದ ಬೆಂಕಿ ನಂದಿಸುವಾಗ ಆಕಸ್ಮಿಕವಾಗಿ ಬೆಂಕಿ ಅವಪಘಡಕ್ಕೆ ತುತ್ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಸಿದ್ದಯ್ಯ ಭಾನುವಾರ ಸಂಜೆ ದೊಡ್ಡಮಾರ್ಗೋನಹಳ್ಳಿ ಹೊರ ವಲಯದ ತೋಟಕ್ಕೆ ತೆರಳಿದ್ದಾರೆ. ಬದುವಿನಲ್ಲಿದ್ದ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಬೆಂಕಿ ಕ್ರಮೇಣ ಬದುವಿನ ಪಕ್ಕದಲ್ಲಿದ್ದ ತೆಂಗಿನ ಸಸಿಗೆ ಆವರಿಸಿದೆ. ನಂದಿಸುವಾಗ ಸಿದ್ದಯ್ಯ ಅವರಿಗೂ ಬೆಂಕಿಯ ಜ್ವಾಲೆ ರಾಚಿದೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಅಕ್ಕಪಕ್ಕದ ತೋಟದವರು ಸಿದ್ದಯ್ಯ ಬೆಂಕಿಯಲ್ಲಿ ಬಿದ್ದಿರುವುದನ್ನು ಕಂಡು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಪಿಎಸ್ಐ ಸಂಗಮೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>