<p><strong>ತುಮಕೂರು:</strong> ರೈತರು ಬದುಕು ಕಟ್ಟಿಕೊಳ್ಳಲು ನಗರಗಳ ಕಡೆಗೆ ವಲಸೆ ಬರುತ್ತಿದ್ದು, ಸರ್ಕಾರ ಇದನ್ನು ತಡೆಯಬೇಕು. ಹಳ್ಳಿಗಳಲ್ಲಿಯೇ ಕೆಲಸ ನಿರ್ವಹಿಸಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಐಕ್ಯ ಫೌಂಡೇಶನ್, ಇನ್ನರ್ ವ್ಹೀಲ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕಲ್ಪತರು ಉತ್ಸವದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಮಾತನಾಡಿದರು.</p>.<p>ಪ್ರಸ್ತುತ ಕೃಷಿ ಲಾಭದಾಯಕವಾಗಿಲ್ಲ, ರೈತರು ವ್ಯವಸಾಯದಿಂದ ವಿಮುಖರಾಗುವ ಪರಿಸ್ಥಿತಿ ಬಂದಿದೆ. ಹೇಮಾವತಿ ನೀರು ಜಿಲ್ಲೆಗೆ ಬರದಿದ್ದರೆ ಇಲ್ಲಿನ ಜನರ ಪರಿಸ್ಥಿತಿ ಚಿಂತಾಜನಕವಾಗಿರುತ್ತಿತ್ತು. ಕುಡಿಯುವ ನೀರು, ಕೃಷಿ, ಅಂತರ್ಜಲ ವೃದ್ಧಿಗೆ ಹೇಮಾವತಿ ವರದಾನವಾಗಿ, ರೈತರ ಬದುಕು ಹಸನಾಗಿದೆ ಎಂದರು.</p>.<p>ರೈತ ಹೋರಾಟಗಾರ ಗಂಗಾಧರ ಕಾಸರಘಟ್ಟ, ‘ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಪಡೆಯಬೇಕು ಎಂಬ ಕಾರಣಕ್ಕೆ ಭೂಮಿಗೆ ರಾಸಾಯನಿಕ ಗೊಬ್ಬರ ಹಾಕಿ ಆಹಾರ ವಿಷ ಮಾಡುತ್ತಿದ್ದೇವೆ. ಇದರಿಂದ ಜನರು ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಕೃಷಿಯಲ್ಲಿ ಈ ಹಿಂದಿನಂತೆ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು.</p>.<p>ನಟರಾದ ಹನುಮಂತೇಗೌಡ, ಅರ್ಜುನ್ ಯೋಗೇಶ್ರಾಜ್, ನಟಿ ಶಿಲ್ಪಾ ಶೈಲೇಶ್, ಐಕ್ಯ ಫೌಂಡೇಶನ್ ಅಧ್ಯಕ್ಷೆ ರೇಖಾ ಶಿವಕುಮಾರ್, ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್, ಪ್ರಧಾನ ಕಾರ್ಯದರ್ಶಿ ಸುಮಿತ್ರಾ ನಾಗರಾಜ್, ಉದ್ಯಮಿ ರೂಪಾ ವಿಶ್ವಾಸ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ರೈತರು ಬದುಕು ಕಟ್ಟಿಕೊಳ್ಳಲು ನಗರಗಳ ಕಡೆಗೆ ವಲಸೆ ಬರುತ್ತಿದ್ದು, ಸರ್ಕಾರ ಇದನ್ನು ತಡೆಯಬೇಕು. ಹಳ್ಳಿಗಳಲ್ಲಿಯೇ ಕೆಲಸ ನಿರ್ವಹಿಸಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಐಕ್ಯ ಫೌಂಡೇಶನ್, ಇನ್ನರ್ ವ್ಹೀಲ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕಲ್ಪತರು ಉತ್ಸವದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಮಾತನಾಡಿದರು.</p>.<p>ಪ್ರಸ್ತುತ ಕೃಷಿ ಲಾಭದಾಯಕವಾಗಿಲ್ಲ, ರೈತರು ವ್ಯವಸಾಯದಿಂದ ವಿಮುಖರಾಗುವ ಪರಿಸ್ಥಿತಿ ಬಂದಿದೆ. ಹೇಮಾವತಿ ನೀರು ಜಿಲ್ಲೆಗೆ ಬರದಿದ್ದರೆ ಇಲ್ಲಿನ ಜನರ ಪರಿಸ್ಥಿತಿ ಚಿಂತಾಜನಕವಾಗಿರುತ್ತಿತ್ತು. ಕುಡಿಯುವ ನೀರು, ಕೃಷಿ, ಅಂತರ್ಜಲ ವೃದ್ಧಿಗೆ ಹೇಮಾವತಿ ವರದಾನವಾಗಿ, ರೈತರ ಬದುಕು ಹಸನಾಗಿದೆ ಎಂದರು.</p>.<p>ರೈತ ಹೋರಾಟಗಾರ ಗಂಗಾಧರ ಕಾಸರಘಟ್ಟ, ‘ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಪಡೆಯಬೇಕು ಎಂಬ ಕಾರಣಕ್ಕೆ ಭೂಮಿಗೆ ರಾಸಾಯನಿಕ ಗೊಬ್ಬರ ಹಾಕಿ ಆಹಾರ ವಿಷ ಮಾಡುತ್ತಿದ್ದೇವೆ. ಇದರಿಂದ ಜನರು ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಕೃಷಿಯಲ್ಲಿ ಈ ಹಿಂದಿನಂತೆ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು.</p>.<p>ನಟರಾದ ಹನುಮಂತೇಗೌಡ, ಅರ್ಜುನ್ ಯೋಗೇಶ್ರಾಜ್, ನಟಿ ಶಿಲ್ಪಾ ಶೈಲೇಶ್, ಐಕ್ಯ ಫೌಂಡೇಶನ್ ಅಧ್ಯಕ್ಷೆ ರೇಖಾ ಶಿವಕುಮಾರ್, ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್, ಪ್ರಧಾನ ಕಾರ್ಯದರ್ಶಿ ಸುಮಿತ್ರಾ ನಾಗರಾಜ್, ಉದ್ಯಮಿ ರೂಪಾ ವಿಶ್ವಾಸ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>