ಪಾವಗಡ: ತಾಲ್ಲೂಕಿನ ಗುಂಡ್ಲಹಳ್ಳಿ ಕೆರೆ ಬಳಿಯ ವಿದ್ಯುತ್ ಟವರ್ಗೆ ರೈತರೊಬ್ಬರು ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುಂಡ್ಲಹಳ್ಳಿ ಕೆರೆ ಬಳಿಯ ಜಮೀನಿನಲ್ಲಿ ವಾಸವಿದ್ದ ನಾರಾಯಣಪ್ಪ (65) ಆತ್ಮಹತ್ಯೆ ಮಾಡಿಕೊಂಡವರು. ಇತ್ತೀಚೆಗೆ ಟೊಮೆಟೊ ಬೆಳೆದಿದ್ದು, ಬೆಲೆ ಕುಸಿತದಿಂದ ನಷ್ಟ ಅನುಭವಿಸಿದ್ದರು. ಕೈ ಸಾಲ ಸೇರಿದಂತೆ ₹5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಮೂರು ಮಂದಿ ಪುತ್ರಿಯರು, ಪುತ್ರ ಇದ್ದಾರೆ.
ಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.