<p><strong>ಕುಣಿಗಲ್: </strong>ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆಯಲಿರುವ ಟ್ರ್ಯಾಕ್ಟರ್ ಪರೇಡ್ಗೆ ತಾಲ್ಲೂಕಿನಿಂದ ಹೊರಟಿದ್ದ ಟ್ರ್ಯಾಕ್ಟರ್ಗಳನ್ನು ಅಂಚೆಪಾಳ್ಯ ಬಳಿ ಸೋಮವಾರ ಸಂಜೆ ಪೊಲೀಸರು ತಡೆದಿದ್ದು, ಅಸಮಾಧಾನಗೊಂಡ ರೈತ ಸಂಘದ ಪದಾಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ್ ಪಟೇಲ್ ನೇತೃತ್ವದಲ್ಲಿ ತಾಲ್ಲೂಕಿನಿಂದ ಟ್ರ್ಯಾಕ್ಟರ್ಗಳಲ್ಲಿ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರು ಕಡೆಗೆ ಸಾಗುತ್ತಿದ್ದರು. ಮಾಹಿತಿ ತಿಳಿದ ಸಿಪಿಐ ರಾಜು ಮತ್ತು ಸಿಬ್ಬಂದಿ ಆಗಮಿಸಿ ಬ್ಯಾರಿಕೇಡ್ಗಳನ್ನು ಅಡ್ಡಲಾಗಿಟ್ಟು ಬೆಂಗಳೂರಿಗೆ ಹೋಗದಂತೆ ತಡೆದರು. ಈ ವೇಳೆ ಪೊಲೀಸರು ಮತ್ತು ಪದಾಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.</p>.<p>ಆನಂದ್ ಪಟೇಲ್ ಮಾತನಾಡಿ, ರೈತ ವಿರೋಧಿ ಕಾಯ್ದೆಗಳನ್ನು ಖಂಡಿಸಿ, ಪರೇಡ್ ಮಾಡುವುದಾಗಿ ಮೊದಲೇ ಸರ್ಕಾರದ ಗಮನಕ್ಕೆ ತರಲಾಗಿದೆ. ಆದರೂ, ಪೊಲೀಸರ ಮೂಲಕ ತಡೆಯಲು ಹೊರಟಿರುವುದು ಖಂಡನೀಯ ಎಂದು<br />ಹೇಳಿದರು.</p>.<p>ರೈತರು ಭಯೋತ್ಪಾದಕರಲ್ಲ. ರಾಜ್ಯ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿರುವುದು ಖಂಡನೀಯ. ರೈತರ ರಥವಾದ ಟ್ರ್ಯಾಕ್ಟರ್ಗಳನ್ನು ತಡೆಯುವಂತೆ ಯಾವ ಕಾನೂನು ಹೇಳಿಲ್ಲ. ರೈತರ ಹೋರಾಟ ಮುಂದುವರಿಯಲಿದೆ ಎಂದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್: </strong>ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆಯಲಿರುವ ಟ್ರ್ಯಾಕ್ಟರ್ ಪರೇಡ್ಗೆ ತಾಲ್ಲೂಕಿನಿಂದ ಹೊರಟಿದ್ದ ಟ್ರ್ಯಾಕ್ಟರ್ಗಳನ್ನು ಅಂಚೆಪಾಳ್ಯ ಬಳಿ ಸೋಮವಾರ ಸಂಜೆ ಪೊಲೀಸರು ತಡೆದಿದ್ದು, ಅಸಮಾಧಾನಗೊಂಡ ರೈತ ಸಂಘದ ಪದಾಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ್ ಪಟೇಲ್ ನೇತೃತ್ವದಲ್ಲಿ ತಾಲ್ಲೂಕಿನಿಂದ ಟ್ರ್ಯಾಕ್ಟರ್ಗಳಲ್ಲಿ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರು ಕಡೆಗೆ ಸಾಗುತ್ತಿದ್ದರು. ಮಾಹಿತಿ ತಿಳಿದ ಸಿಪಿಐ ರಾಜು ಮತ್ತು ಸಿಬ್ಬಂದಿ ಆಗಮಿಸಿ ಬ್ಯಾರಿಕೇಡ್ಗಳನ್ನು ಅಡ್ಡಲಾಗಿಟ್ಟು ಬೆಂಗಳೂರಿಗೆ ಹೋಗದಂತೆ ತಡೆದರು. ಈ ವೇಳೆ ಪೊಲೀಸರು ಮತ್ತು ಪದಾಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.</p>.<p>ಆನಂದ್ ಪಟೇಲ್ ಮಾತನಾಡಿ, ರೈತ ವಿರೋಧಿ ಕಾಯ್ದೆಗಳನ್ನು ಖಂಡಿಸಿ, ಪರೇಡ್ ಮಾಡುವುದಾಗಿ ಮೊದಲೇ ಸರ್ಕಾರದ ಗಮನಕ್ಕೆ ತರಲಾಗಿದೆ. ಆದರೂ, ಪೊಲೀಸರ ಮೂಲಕ ತಡೆಯಲು ಹೊರಟಿರುವುದು ಖಂಡನೀಯ ಎಂದು<br />ಹೇಳಿದರು.</p>.<p>ರೈತರು ಭಯೋತ್ಪಾದಕರಲ್ಲ. ರಾಜ್ಯ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿರುವುದು ಖಂಡನೀಯ. ರೈತರ ರಥವಾದ ಟ್ರ್ಯಾಕ್ಟರ್ಗಳನ್ನು ತಡೆಯುವಂತೆ ಯಾವ ಕಾನೂನು ಹೇಳಿಲ್ಲ. ರೈತರ ಹೋರಾಟ ಮುಂದುವರಿಯಲಿದೆ ಎಂದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>