<p>ತುಮಕೂರು: ಕೋವಿಡ್ ಲಾಕ್ಡೌನ್ ಸಮಯದಲ್ಲಿ ಬೆಳೆದ ಬೆಳೆಯನ್ನುಮಾರುಕಟ್ಟೆಗೆ ಸಾಗಿಸಿ, ಮಾರಾಟ ಮಾಡಲು ಸಾಧ್ಯವಾಗದೆ ಅನುಭವಿ<br />ಸಿರುವ ನಷ್ಟವನ್ನು ಅಂದಾಜಿಸಲು ಸಮಿತಿ ರಚಿಸಬೇಕು. ಸೂಕ್ತ ಪ್ರಮಾಣದಲ್ಲಿ ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.</p>.<p>ಕೊರೊನಾ ಸೋಂಕಿನಿಂದ ಮೃತಪಟ್ಟ ರೈತ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಬೇಕು ಎಂದು<br />ಜಿಲ್ಲಾಧಿಕಾರಿ ಕಚೇರಿ ಎದುರು ಗುರು<br />ವಾರ ನಡೆಸಿದ ಪ್ರತಿಭಟನೆಯಲ್ಲಿ ಒತ್ತಾಯಿ<br />ಸಿದರು. ಸರ್ಕಾರದ ರೈತರ ವಿರೋಧಿ ಧೋರಣೆ ಖಂಡಿಸಿ ಘೋಷಣೆ ಕೂಗಿದರು.</p>.<p>‘ಕೋವಿಡ್ ಲಾಕ್ಡೌನ್ ಸಮಯ<br />ದಲ್ಲಿ ಸಾವಿರಾರು ಎಕರೆಯಲ್ಲಿ ಬೆಳೆ<br />ದಿದ್ದ ಹಣ್ಣು, ತರಕಾರಿ, ಇನ್ನಿತರ ಕೃಷಿ<br />ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲಾ<br />ಗದೆ ಸುಮಾರು ₹1 ಲಕ್ಷ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಆದರೆ ರಾಜ್ಯ ಸರ್ಕಾರ ಹೆಕ್ಟೇರ್ಗೆ ₹3,500 ಭಿಕ್ಷೆಯ ರೀತಿಯಲ್ಲಿ ಪರಿಹಾರ ಘೋಷಿಸಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೋವಿಡ್ ಎರಡನೇ ಅಲೆಯ ಬಗ್ಗೆ ತಜ್ಞರು ನೀಡಿದ್ದ ವರದಿಯನ್ನು ನಿರ್ಲಕ್ಷ್ಯಿಸಿ ಚುನಾವಣೆಗಳು,ಕುಂಭಮೇಳ ನಡೆಸಿದ್ದರ ಪರಿಣಾಮ ದೇಶದಾದ್ಯಂತ ಲಕ್ಷಾಂತರ ಜನರು ಬಲಿಯಾದರು. ಈ ಎಲ್ಲರ ಸಾವಿಗೆ ಸರ್ಕಾರವೇ ನೇರ ಹೊಣೆ. ಕೊಂಚ ಮಾನವೀಯತೆ ಇದ್ದರೂ ಸಾವನ್ನಪ್ಪಿರುವ ಎಲ್ಲಾ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಬೇಕಿತ್ತು. ಕೋವಿಡ್ ಮೂರನೇ ಅಲೆ ಕಾಣಿಸಿಕೊಳ್ಳುವ ಬಗ್ಗೆ ತಜ್ಞರು ಈಗಾಗಲೇ ಎಚ್ಚರಿಸಿದ್ದು, ಗ್ರಾಮೀಣ ಭಾಗದಲ್ಲಿ ಕೊರೊನಾ ಪರೀಕ್ಷೆ ವ್ಯಾಪಕಗೊಳಿಸಬೇಕು. ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆ ಹಾಕಬೇಕು ಎಂದು ಆಗ್ರಹಿಸಿದರು.</p>.<p>ಜನಸಾಮಾನ್ಯರು ಕೆಲಸವಿಲ್ಲದೆ, ಒಂದು ಹೊತ್ತಿನ ಊಟಕ್ಕೂ ಪರದಾಡು<br />ತ್ತಿದ್ದು, ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲಾಗದೆ ಪರಿತಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ಬೆಲೆ ಹೆಚ್ಚಳ ಮಾಡಿ, ಸಂಕಷ್ಟಕ್ಕೆ ದೂಡಿದೆ. ಕೃಷಿಗೆ ಬಳಸುವ ರಸಗೊಬ್ಬರ, ಔಷಧ, ಕ್ರಿಮಿನಾಶಕ, ಪರಿಕರಗಳ ಬೆಲೆ ಹೆಚ್ಚಳವಾಗಿದೆ. ತಕ್ಷಣ ತೈಲ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.</p>.<p>ಉಚಿತವಾಗಿ ಬಿತ್ತನೆ ಬೀಜ ಕೊಡಬೇಕು. ರಸಗೊಬ್ಬರ, ಕ್ರಿಮಿನಾಶಕ<br />ಗಳನ್ನು ರಿಯಾಯಿತಿ ದರದಲ್ಲಿ ಒದಗಿಸ<br />ಬೇಕು. ಕೇಂದ್ರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿದ್ದ ಪ್ರಕಾಶ್ ಕಮ್ಮರಡಿ ಅವರು ನೀಡಿರುವ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಮುಖಂಡರಾದ ಜಿ.ಶಂಕರಪ್ಪ, ಕೆ.ಎನ್.ವೆಂಕಟೇಗೌಡ, ಸಿ.ಜಿ.ಲೋಕೇಶ್, ಶ್ರೀನಿವಾಸ್, ಲಕ್ಷ್ಮಣಗೌಡ, ರಂಗಹನುಮಯ್ಯ, ಮಹಮದ್ ಶಬ್ಬೀರ್, ಕೆಂಚಪ್ಪ, ಶಿವರಾಜು, ಕೆ.ಎಸ್.ಜಯಮ್ಮ, ಎ.ಜಿ.ಮಂಜುನಾಥ್ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಕೋವಿಡ್ ಲಾಕ್ಡೌನ್ ಸಮಯದಲ್ಲಿ ಬೆಳೆದ ಬೆಳೆಯನ್ನುಮಾರುಕಟ್ಟೆಗೆ ಸಾಗಿಸಿ, ಮಾರಾಟ ಮಾಡಲು ಸಾಧ್ಯವಾಗದೆ ಅನುಭವಿ<br />ಸಿರುವ ನಷ್ಟವನ್ನು ಅಂದಾಜಿಸಲು ಸಮಿತಿ ರಚಿಸಬೇಕು. ಸೂಕ್ತ ಪ್ರಮಾಣದಲ್ಲಿ ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.</p>.<p>ಕೊರೊನಾ ಸೋಂಕಿನಿಂದ ಮೃತಪಟ್ಟ ರೈತ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಬೇಕು ಎಂದು<br />ಜಿಲ್ಲಾಧಿಕಾರಿ ಕಚೇರಿ ಎದುರು ಗುರು<br />ವಾರ ನಡೆಸಿದ ಪ್ರತಿಭಟನೆಯಲ್ಲಿ ಒತ್ತಾಯಿ<br />ಸಿದರು. ಸರ್ಕಾರದ ರೈತರ ವಿರೋಧಿ ಧೋರಣೆ ಖಂಡಿಸಿ ಘೋಷಣೆ ಕೂಗಿದರು.</p>.<p>‘ಕೋವಿಡ್ ಲಾಕ್ಡೌನ್ ಸಮಯ<br />ದಲ್ಲಿ ಸಾವಿರಾರು ಎಕರೆಯಲ್ಲಿ ಬೆಳೆ<br />ದಿದ್ದ ಹಣ್ಣು, ತರಕಾರಿ, ಇನ್ನಿತರ ಕೃಷಿ<br />ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲಾ<br />ಗದೆ ಸುಮಾರು ₹1 ಲಕ್ಷ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಆದರೆ ರಾಜ್ಯ ಸರ್ಕಾರ ಹೆಕ್ಟೇರ್ಗೆ ₹3,500 ಭಿಕ್ಷೆಯ ರೀತಿಯಲ್ಲಿ ಪರಿಹಾರ ಘೋಷಿಸಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೋವಿಡ್ ಎರಡನೇ ಅಲೆಯ ಬಗ್ಗೆ ತಜ್ಞರು ನೀಡಿದ್ದ ವರದಿಯನ್ನು ನಿರ್ಲಕ್ಷ್ಯಿಸಿ ಚುನಾವಣೆಗಳು,ಕುಂಭಮೇಳ ನಡೆಸಿದ್ದರ ಪರಿಣಾಮ ದೇಶದಾದ್ಯಂತ ಲಕ್ಷಾಂತರ ಜನರು ಬಲಿಯಾದರು. ಈ ಎಲ್ಲರ ಸಾವಿಗೆ ಸರ್ಕಾರವೇ ನೇರ ಹೊಣೆ. ಕೊಂಚ ಮಾನವೀಯತೆ ಇದ್ದರೂ ಸಾವನ್ನಪ್ಪಿರುವ ಎಲ್ಲಾ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಬೇಕಿತ್ತು. ಕೋವಿಡ್ ಮೂರನೇ ಅಲೆ ಕಾಣಿಸಿಕೊಳ್ಳುವ ಬಗ್ಗೆ ತಜ್ಞರು ಈಗಾಗಲೇ ಎಚ್ಚರಿಸಿದ್ದು, ಗ್ರಾಮೀಣ ಭಾಗದಲ್ಲಿ ಕೊರೊನಾ ಪರೀಕ್ಷೆ ವ್ಯಾಪಕಗೊಳಿಸಬೇಕು. ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆ ಹಾಕಬೇಕು ಎಂದು ಆಗ್ರಹಿಸಿದರು.</p>.<p>ಜನಸಾಮಾನ್ಯರು ಕೆಲಸವಿಲ್ಲದೆ, ಒಂದು ಹೊತ್ತಿನ ಊಟಕ್ಕೂ ಪರದಾಡು<br />ತ್ತಿದ್ದು, ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲಾಗದೆ ಪರಿತಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ಬೆಲೆ ಹೆಚ್ಚಳ ಮಾಡಿ, ಸಂಕಷ್ಟಕ್ಕೆ ದೂಡಿದೆ. ಕೃಷಿಗೆ ಬಳಸುವ ರಸಗೊಬ್ಬರ, ಔಷಧ, ಕ್ರಿಮಿನಾಶಕ, ಪರಿಕರಗಳ ಬೆಲೆ ಹೆಚ್ಚಳವಾಗಿದೆ. ತಕ್ಷಣ ತೈಲ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.</p>.<p>ಉಚಿತವಾಗಿ ಬಿತ್ತನೆ ಬೀಜ ಕೊಡಬೇಕು. ರಸಗೊಬ್ಬರ, ಕ್ರಿಮಿನಾಶಕ<br />ಗಳನ್ನು ರಿಯಾಯಿತಿ ದರದಲ್ಲಿ ಒದಗಿಸ<br />ಬೇಕು. ಕೇಂದ್ರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿದ್ದ ಪ್ರಕಾಶ್ ಕಮ್ಮರಡಿ ಅವರು ನೀಡಿರುವ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಮುಖಂಡರಾದ ಜಿ.ಶಂಕರಪ್ಪ, ಕೆ.ಎನ್.ವೆಂಕಟೇಗೌಡ, ಸಿ.ಜಿ.ಲೋಕೇಶ್, ಶ್ರೀನಿವಾಸ್, ಲಕ್ಷ್ಮಣಗೌಡ, ರಂಗಹನುಮಯ್ಯ, ಮಹಮದ್ ಶಬ್ಬೀರ್, ಕೆಂಚಪ್ಪ, ಶಿವರಾಜು, ಕೆ.ಎಸ್.ಜಯಮ್ಮ, ಎ.ಜಿ.ಮಂಜುನಾಥ್ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>