<p><strong>ಗುಬ್ಬಿ</strong>: ಬೆಲೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳಿಗೆ ತಕ್ಷಣ ಖಾತೆ ಮಾಡಿಕೊಟ್ಟು ಪಹಣಿ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಚನ್ನಬಸವೇಶ್ವರ ದೇವಾಲಯ ದಿಂದ ಮೆರವಣಿಗೆಯಲ್ಲಿ ಹೊರಟ ರೈತರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಬಿ. ಆರತಿ ಅವರಿಗೆ ಮನವಿ ಪತ್ರ |ಸಲ್ಲಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಅಡಿಕೆ ಮತ್ತು ತೆಂಗನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದಾರೆ. ಅದರಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಈ ವರ್ಷ ಸುರಿದ ಬಾರಿ ಮಳೆಯಿಂದ ಅಡಿಕೆ ಇಳುವರಿ ಕಡಿಮೆಯಾಗಿದೆ. ಜೊತೆಗೆ ಬೆಲೆ ಕುಸಿಯುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಸರ್ಕಾರ ತಕ್ಷಣ ರೈತರ ಸಮಸ್ಯೆಗೆ ಸ್ಪಂದಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ<br />ನೀಡಿದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, ಬೆಲೆ ಕುಸಿತದಿಂದ ರೈತರು ಈಗಾಗಲೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಸರ್ಕಾರ ವಿದೇಶಗಳಿಂದ ಅಡಿಕೆಯನ್ನು ಸುಂಕವಿಲ್ಲದೆ ಆಮದು ಮಾಡಿಕೊಳ್ಳುತ್ತಿದೆ. ಜೊತೆಗೆ, ಕಳ್ಳ ಸಾಗಾಣಿಕೆ ಮೂಲಕ ದೇಶದೊಳಗೆ ಅಡಿಕೆ ತರುತ್ತಿರುವುದು ಬೆಲೆ ಕುಸಿತಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.</p>.<p>ಕಾರ್ಯದರ್ಶಿ ಲೋಕೇಶ್ ಮಾತನಾಡಿ, ದೇಶದ ಒಟ್ಟಾರೆ ತೆಂಗು ಉತ್ಪಾದನೆಯ ಶೇ 50ರಷ್ಟನ್ನು ತುಮಕೂರು ಜಿಲ್ಲೆಯಲ್ಲಿಯೇ ಬೆಳೆಯಲಾಗುತ್ತಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ. ವಿದ್ಯುತ್ ಖಾಸಗೀಕರಣವನ್ನು ಕೈಬಿಟ್ಟು ರೈತ ಪರವಾದ ನಿಲುವು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ರೈತ ಸಂಘದ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಬಸವರಾಜು, ಕಾರ್ಯಾಧ್ಯಕ್ಷ ನರಸಿಂಹಮೂರ್ತಿ, ಕಾರ್ಯದರ್ಶಿ ಜಗದೀಶ್,ಪ್ರಾಂತ ರೈತ ಸಂಘದ ಅಜ್ಜಪ್ಪ, ಹೋಬಳಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಬೆಲೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳಿಗೆ ತಕ್ಷಣ ಖಾತೆ ಮಾಡಿಕೊಟ್ಟು ಪಹಣಿ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಚನ್ನಬಸವೇಶ್ವರ ದೇವಾಲಯ ದಿಂದ ಮೆರವಣಿಗೆಯಲ್ಲಿ ಹೊರಟ ರೈತರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಬಿ. ಆರತಿ ಅವರಿಗೆ ಮನವಿ ಪತ್ರ |ಸಲ್ಲಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಅಡಿಕೆ ಮತ್ತು ತೆಂಗನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದಾರೆ. ಅದರಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಈ ವರ್ಷ ಸುರಿದ ಬಾರಿ ಮಳೆಯಿಂದ ಅಡಿಕೆ ಇಳುವರಿ ಕಡಿಮೆಯಾಗಿದೆ. ಜೊತೆಗೆ ಬೆಲೆ ಕುಸಿಯುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಸರ್ಕಾರ ತಕ್ಷಣ ರೈತರ ಸಮಸ್ಯೆಗೆ ಸ್ಪಂದಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ<br />ನೀಡಿದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, ಬೆಲೆ ಕುಸಿತದಿಂದ ರೈತರು ಈಗಾಗಲೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಸರ್ಕಾರ ವಿದೇಶಗಳಿಂದ ಅಡಿಕೆಯನ್ನು ಸುಂಕವಿಲ್ಲದೆ ಆಮದು ಮಾಡಿಕೊಳ್ಳುತ್ತಿದೆ. ಜೊತೆಗೆ, ಕಳ್ಳ ಸಾಗಾಣಿಕೆ ಮೂಲಕ ದೇಶದೊಳಗೆ ಅಡಿಕೆ ತರುತ್ತಿರುವುದು ಬೆಲೆ ಕುಸಿತಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.</p>.<p>ಕಾರ್ಯದರ್ಶಿ ಲೋಕೇಶ್ ಮಾತನಾಡಿ, ದೇಶದ ಒಟ್ಟಾರೆ ತೆಂಗು ಉತ್ಪಾದನೆಯ ಶೇ 50ರಷ್ಟನ್ನು ತುಮಕೂರು ಜಿಲ್ಲೆಯಲ್ಲಿಯೇ ಬೆಳೆಯಲಾಗುತ್ತಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ. ವಿದ್ಯುತ್ ಖಾಸಗೀಕರಣವನ್ನು ಕೈಬಿಟ್ಟು ರೈತ ಪರವಾದ ನಿಲುವು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ರೈತ ಸಂಘದ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಬಸವರಾಜು, ಕಾರ್ಯಾಧ್ಯಕ್ಷ ನರಸಿಂಹಮೂರ್ತಿ, ಕಾರ್ಯದರ್ಶಿ ಜಗದೀಶ್,ಪ್ರಾಂತ ರೈತ ಸಂಘದ ಅಜ್ಜಪ್ಪ, ಹೋಬಳಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>