ಚಿರತೆ ಹಾವಳಿ ಹೆಚ್ಚಾಗಿದ್ದು, ಮನುಷ್ಯರು, ಪ್ರಾಣಿಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಏನೂ ಕ್ರಮ ಕೈಗೊಂಡಿಲ್ಲ. ಕಳೆದ ವಾರವಷ್ಟೇ ಬನ್ನಿಕುಪ್ಪೆಯಲ್ಲಿ ಚಿರತೆ ವೃದ್ಧೆ ಮೇಲೆ ದಾಳಿ ನಡೆಸಿತ್ತು. ಈಗ ಕುರಿ ಮೇಲೆ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.