<p><strong>ಗುಬ್ಬಿ</strong>: ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗದೆ ಆಹಾರ ಧಾನ್ಯಗಳ ಉತ್ಪಾದನೆ ಕಡಿಮೆಯಾಗಿದ್ದು, ಅನೇಕ ರೈತರು ಹೂವು, ತರಕಾರಿ ಬೆಳೆದು ಆದಾಯದ ಮೂಲ ಹೆಚ್ಚಿಸಿಕೊಳ್ಳುವತ್ತ ಚಿತ್ತ ಹರಿಸಿದ್ದಾರೆ.</p>.<p>ತಾಲ್ಲೂಕಿನ ಪ್ರಮುಖ ವಾಣಿಜ್ಯ ಬೆಳೆ ತೆಂಗು ರೋಗ ಭಾದಿತವಾಗಿ ಇಳುವರಿ ಇಲ್ಲವಾಗಿದ್ದರೆ, ಅಡಿಕೆ ಧಾರಣೆ ಕುಸಿಯುತ್ತಿರುವುದು ರೈತರಲ್ಲಿ ಆತಂಕ ತಂದಿತ್ತು. ಹೈನುಗಾರಿಕೆ ನಂಬಿ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ಮಳೆಯ ಕೊರತೆಯಿಂದಾಗಿ ರಾಸುಗಳ ಮೇವು ಕೊರತೆಯಾಗುವ ಆತಂಕ ಎದುರಾಗಿದೆ.</p>.<p>ತಾಲ್ಲೂಕಿನ ನಿಟ್ಟೂರು ಹೋಬಳಿ ಅಂಕಾಪುರದ ರೈತ ಶಿವಲಿಂಗಯ್ಯ ಜಮೀನಿನಲ್ಲಿ ಖಾಲಿ ಇದ್ದ ಸ್ವಲ್ಪ ಜಾಗದಲ್ಲಿಯೇ ಸೇವಂತಿಗೆ ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತಿರುವುದರಿಂದ ಲಾಭ ಪಡೆಯಲು ಸಾಧ್ಯವಾಗಿದೆ.</p>.<p>‘ಮಳೆ ಕಡಿಮೆಯಾಗಿದ್ದರಿಂದ ಏನು ಮಾಡುವುದು ಎನ್ನುವುದೇ ತೋಚುತ್ತಿರಲಿಲ್ಲ. ಗಟ್ಟಿ ಮನಸ್ಸು ಮಾಡಿ ಸೇವಂತಿಗೆ ಸಸಿ ನಾಟಿ ಮಾಡಿ ಬೆಳೆದವು. ದುಬಾರಿ ವೆಚ್ಚದ ನಡುವೆಯೂ ಉತ್ತಮ ಲಾಭವಾಗಿರುವುದು ಸಂತಸ ತಂದಿದೆ’ ಎನ್ನುತ್ತಾರೆ ಹೂವು ಬೆಳೆಗಾರ ಶಿವಲಿಂಗಯ್ಯ.</p>.<p>ರೈತರು ಕೇವಲ ಒಂದು ಬೆಳೆಯನ್ನೇ ನಂಬಿಕೊಳ್ಳದೆ ಪರ್ಯಾಯ ಬೆಳೆಗಳತ್ತ ಗಮನಹರಿಸಿದಲ್ಲಿ ಆದಾಯ ಪಡೆಯಲು ಸಾಧ್ಯ. ರೈತರು ತೆಂಗು, ಅಡಿಕೆಯನ್ನೇ ನಂಬಿಕೊಳ್ಳದೆ ಬೇರೆ ಬೆಳೆಗಳನ್ನು ಬೆಳೆಯುವತ್ತಲೂ ಗಮನಹರಿಬೇಕಿದೆ ಎನ್ನುತ್ತಾರೆ ಕೃಷಿ ಅಧಿಕಾರಿಗಳು.</p>.<p>ತೆಂಗು ಮತ್ತು ಅಡಿಕೆ ಬೆಳೆಗೆ ಜೋತು ಬೀಳದೆ ಬಹುಬೆಳೆ ಕೃಷಿ ಪದ್ಧತಿ ಅನುಸರಿಸಿದಲ್ಲಿ ರೈತರು ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿರುವುದಿಲ್ಲ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಇದರ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎನ್ನುತ್ತಾರೆ ಕೃಷಿಕ ಮಹೇಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗದೆ ಆಹಾರ ಧಾನ್ಯಗಳ ಉತ್ಪಾದನೆ ಕಡಿಮೆಯಾಗಿದ್ದು, ಅನೇಕ ರೈತರು ಹೂವು, ತರಕಾರಿ ಬೆಳೆದು ಆದಾಯದ ಮೂಲ ಹೆಚ್ಚಿಸಿಕೊಳ್ಳುವತ್ತ ಚಿತ್ತ ಹರಿಸಿದ್ದಾರೆ.</p>.<p>ತಾಲ್ಲೂಕಿನ ಪ್ರಮುಖ ವಾಣಿಜ್ಯ ಬೆಳೆ ತೆಂಗು ರೋಗ ಭಾದಿತವಾಗಿ ಇಳುವರಿ ಇಲ್ಲವಾಗಿದ್ದರೆ, ಅಡಿಕೆ ಧಾರಣೆ ಕುಸಿಯುತ್ತಿರುವುದು ರೈತರಲ್ಲಿ ಆತಂಕ ತಂದಿತ್ತು. ಹೈನುಗಾರಿಕೆ ನಂಬಿ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ಮಳೆಯ ಕೊರತೆಯಿಂದಾಗಿ ರಾಸುಗಳ ಮೇವು ಕೊರತೆಯಾಗುವ ಆತಂಕ ಎದುರಾಗಿದೆ.</p>.<p>ತಾಲ್ಲೂಕಿನ ನಿಟ್ಟೂರು ಹೋಬಳಿ ಅಂಕಾಪುರದ ರೈತ ಶಿವಲಿಂಗಯ್ಯ ಜಮೀನಿನಲ್ಲಿ ಖಾಲಿ ಇದ್ದ ಸ್ವಲ್ಪ ಜಾಗದಲ್ಲಿಯೇ ಸೇವಂತಿಗೆ ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತಿರುವುದರಿಂದ ಲಾಭ ಪಡೆಯಲು ಸಾಧ್ಯವಾಗಿದೆ.</p>.<p>‘ಮಳೆ ಕಡಿಮೆಯಾಗಿದ್ದರಿಂದ ಏನು ಮಾಡುವುದು ಎನ್ನುವುದೇ ತೋಚುತ್ತಿರಲಿಲ್ಲ. ಗಟ್ಟಿ ಮನಸ್ಸು ಮಾಡಿ ಸೇವಂತಿಗೆ ಸಸಿ ನಾಟಿ ಮಾಡಿ ಬೆಳೆದವು. ದುಬಾರಿ ವೆಚ್ಚದ ನಡುವೆಯೂ ಉತ್ತಮ ಲಾಭವಾಗಿರುವುದು ಸಂತಸ ತಂದಿದೆ’ ಎನ್ನುತ್ತಾರೆ ಹೂವು ಬೆಳೆಗಾರ ಶಿವಲಿಂಗಯ್ಯ.</p>.<p>ರೈತರು ಕೇವಲ ಒಂದು ಬೆಳೆಯನ್ನೇ ನಂಬಿಕೊಳ್ಳದೆ ಪರ್ಯಾಯ ಬೆಳೆಗಳತ್ತ ಗಮನಹರಿಸಿದಲ್ಲಿ ಆದಾಯ ಪಡೆಯಲು ಸಾಧ್ಯ. ರೈತರು ತೆಂಗು, ಅಡಿಕೆಯನ್ನೇ ನಂಬಿಕೊಳ್ಳದೆ ಬೇರೆ ಬೆಳೆಗಳನ್ನು ಬೆಳೆಯುವತ್ತಲೂ ಗಮನಹರಿಬೇಕಿದೆ ಎನ್ನುತ್ತಾರೆ ಕೃಷಿ ಅಧಿಕಾರಿಗಳು.</p>.<p>ತೆಂಗು ಮತ್ತು ಅಡಿಕೆ ಬೆಳೆಗೆ ಜೋತು ಬೀಳದೆ ಬಹುಬೆಳೆ ಕೃಷಿ ಪದ್ಧತಿ ಅನುಸರಿಸಿದಲ್ಲಿ ರೈತರು ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿರುವುದಿಲ್ಲ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಇದರ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎನ್ನುತ್ತಾರೆ ಕೃಷಿಕ ಮಹೇಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>