ಸಿರಿಧಾನ್ಯ ಸಂಸ್ಕರಣಾ ಘಟಕದ ಎನ್.ಇಂದಿರಮ್ಮ ಮಾತನಾಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಸಿರಿಧಾನ್ಯದ ಕಣಜವಾಗಿತ್ತು. ಮಳೆಯಾಶ್ರಿತ ಬೆಳೆಯಾಗಿ ರಾಗಿ, ನವಣೆ, ಸಾಮೆ, ಹಾರಕ, ಹುರುಳಿ ಬೆಳೆಗಳನ್ನು ಬೆಳೆದು ನಷ್ಟ ಅನುಭವಿಸಿ, ತೋಟಗಾರಿಕಾ ಬೆಳೆಗಳತ್ತ ವಾಲುತ್ತಿದ್ದಾರೆ. ಇದು ಮುಂದೆ ಆಹಾರದ ಅಭದ್ರತೆ ಎದುರಾಗಲು ಕಾರಣವಾಗಿದೆ. ಈ ಬಗ್ಗೆ ಸರ್ಕಾರಗಳು ಗಮನಹರಿಸಿ, ಮಳೆಯಾಶ್ರಿತ ಬೆಳೆ ಬೆಳೆಯುವ ರೈತರಿಗೆ ಉತ್ತೇಜನ ನೀಡಬೇಕು ಎಂದು ಒತ್ತಾಯಿಸಿದರು.