ಕೋವಿಡ್– 19 ಸಂದಿಗ್ಧ ಸ್ಥಿತಿಯಲ್ಲಿಯೂ ರೈತರು ತಮ್ಮ ಕಾಯಕದಲ್ಲಿ ತೊಡಗಿದ್ದಾರೆ. ದೇಶದ ಜನತೆಗೆ ಆಹಾರ ಧಾನ್ಯಗಳನ್ನು ಬೆಳೆದುಕೊಡುತ್ತಿದ್ದಾರೆ. ಆದರೆ, ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಸಹಕಾರ ನೀಡುವ ಬದಲಿಗೆ, ರೈತ ವಿರೋಧಿ ಕಾಯ್ದೆ, ತಿದ್ದುಪಡಿಗಳನ್ನು ಜಾರಿಗಳಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.