<p><strong>ಗುಬ್ಬಿ:</strong> ಬೇಸಿಗೆಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡದೆ ಬೆಸ್ಕಾಂ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಸಮರ್ಪಕ ವಿದ್ಯುತ್ ಒದಗಿಸುವಂತೆ ಆಗ್ರಹಿಸಿ ನೂರಾರು ರೈತರು ಸೋಮವಾರ ಹೊಸಕೆರೆಯ ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. </p>.<p>ಬಂಡನಹಳ್ಳಿ, ಭೋವಿಕಾಲೋನಿ ಭೋಗಸಂದ್ರ, ಹರದಗೆರೆ, ಕಳನಹಳ್ಳಿ, ಮುದ್ದನಹಳ್ಳಿ ಹಟ್ಟಿ, ಕರಡಿಕಲ್ಲು ಭಾಗದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ವಿದ್ಯುತ್ ಸರಬರಾಜಿನಲ್ಲಿ ನಿರಂತರವಾಗಿ ವ್ಯತ್ಯಯ ಉಂಟಾಗುತ್ತಿದೆ. ಬೆಸ್ಕಾಂನವರು ಯಾವಾಗ ವಿದ್ಯುತ್ ಕೊಡುವರೋ, ತೆಗೆಯುವರೋ ತಿಳಿಯದಾಗಿದೆ. ಇದೀಗ ಮಕ್ಕಳಿಗೆ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆ ತಯಾರಿಗೆ ಅನಾನುಕೂಲ ಆಗುತ್ತಿದೆ. ತೋಟದ ಮನೆಗಳ ರೈತರ ಪಾಡನ್ನಂತೂ ಹೇಳತೀರದಾಗಿದೆ.<br /> ಹಲವು ವೇಳೆ ಕುಡಿಯಲು ನೀರು ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಸಮಸ್ಯೆ ಬಗೆಹರಿಸಿ ಕೊಡುವಂತೆ ಹಲವಾರು ವರ್ಷಗಳಿಂದ ಅಧಿಕಾರಿಗಳನ್ನು ಕೇಳಿಕೊಳ್ಳುತ್ತಿದ್ದರೂ ಜಾಣಮೌನ ವಹಿಸಿದ್ದಾರೆ. ಇದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಎಇಇ ರಾಜೇಶ್, ರೈತರ ಸಮಸ್ಯೆ ಅರಿತು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ. ಪ್ರಗತಿಯಲ್ಲಿರುವ ಲಿಂಕ್ ಲೈನ್ ಕಾಮಗಾರಿಯನ್ನು ತುರ್ತಾಗಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಅಗತ್ಯ ಕ್ರಮಕೈಗೊಂಡು ರೈತರಿಗೆ ತೊಂದರೆ ಆಗದಂತೆ ವಿದ್ಯುತ್ ಪೂರೈಸಲಾಗುವುದು ಎಂದರು.</p>.<p>ಮಹಾ ರುದ್ರಸ್ವಾಮಿ, ಶಿವರಾಜು, ಮಧು, ಪ್ರಭಾಕರ್, ಗಂಗಾಧರ್, ಕುಮಾರ್, ರಾಜಣ್ಣ, ಕಾಂತಣ್ಣ, ಬಸವರಾಜು, ನಾಗರಾಜು, ಪಾಪಣ್ಣ, ನಟರಾಜು, ದಕ್ಷಿಣಾಮೂರ್ತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಬೇಸಿಗೆಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡದೆ ಬೆಸ್ಕಾಂ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಸಮರ್ಪಕ ವಿದ್ಯುತ್ ಒದಗಿಸುವಂತೆ ಆಗ್ರಹಿಸಿ ನೂರಾರು ರೈತರು ಸೋಮವಾರ ಹೊಸಕೆರೆಯ ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. </p>.<p>ಬಂಡನಹಳ್ಳಿ, ಭೋವಿಕಾಲೋನಿ ಭೋಗಸಂದ್ರ, ಹರದಗೆರೆ, ಕಳನಹಳ್ಳಿ, ಮುದ್ದನಹಳ್ಳಿ ಹಟ್ಟಿ, ಕರಡಿಕಲ್ಲು ಭಾಗದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ವಿದ್ಯುತ್ ಸರಬರಾಜಿನಲ್ಲಿ ನಿರಂತರವಾಗಿ ವ್ಯತ್ಯಯ ಉಂಟಾಗುತ್ತಿದೆ. ಬೆಸ್ಕಾಂನವರು ಯಾವಾಗ ವಿದ್ಯುತ್ ಕೊಡುವರೋ, ತೆಗೆಯುವರೋ ತಿಳಿಯದಾಗಿದೆ. ಇದೀಗ ಮಕ್ಕಳಿಗೆ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆ ತಯಾರಿಗೆ ಅನಾನುಕೂಲ ಆಗುತ್ತಿದೆ. ತೋಟದ ಮನೆಗಳ ರೈತರ ಪಾಡನ್ನಂತೂ ಹೇಳತೀರದಾಗಿದೆ.<br /> ಹಲವು ವೇಳೆ ಕುಡಿಯಲು ನೀರು ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಸಮಸ್ಯೆ ಬಗೆಹರಿಸಿ ಕೊಡುವಂತೆ ಹಲವಾರು ವರ್ಷಗಳಿಂದ ಅಧಿಕಾರಿಗಳನ್ನು ಕೇಳಿಕೊಳ್ಳುತ್ತಿದ್ದರೂ ಜಾಣಮೌನ ವಹಿಸಿದ್ದಾರೆ. ಇದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಎಇಇ ರಾಜೇಶ್, ರೈತರ ಸಮಸ್ಯೆ ಅರಿತು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ. ಪ್ರಗತಿಯಲ್ಲಿರುವ ಲಿಂಕ್ ಲೈನ್ ಕಾಮಗಾರಿಯನ್ನು ತುರ್ತಾಗಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಅಗತ್ಯ ಕ್ರಮಕೈಗೊಂಡು ರೈತರಿಗೆ ತೊಂದರೆ ಆಗದಂತೆ ವಿದ್ಯುತ್ ಪೂರೈಸಲಾಗುವುದು ಎಂದರು.</p>.<p>ಮಹಾ ರುದ್ರಸ್ವಾಮಿ, ಶಿವರಾಜು, ಮಧು, ಪ್ರಭಾಕರ್, ಗಂಗಾಧರ್, ಕುಮಾರ್, ರಾಜಣ್ಣ, ಕಾಂತಣ್ಣ, ಬಸವರಾಜು, ನಾಗರಾಜು, ಪಾಪಣ್ಣ, ನಟರಾಜು, ದಕ್ಷಿಣಾಮೂರ್ತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>