ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡವಾಳಶಾಹಿಗಾಗಿ ರೈತರ ಬಲಿ

Last Updated 27 ಸೆಪ್ಟೆಂಬರ್ 2020, 16:36 IST
ಅಕ್ಷರ ಗಾತ್ರ

ತುರುವೇಕೆರೆ: 28ರಂದು ನಡೆಯುವ ರಾಜ್ಯ ಬಂದ್‌ಗೆ ಕನ್ನಡ ರಕ್ಷಣಾ ವೇದಿಕೆಯ ಬೆಂಬಲವಿದೆ ಎಂದು ವೇದಿಕೆ ಉಪಾಧ್ಯಕ್ಷ ಮುಷೀರ್ ಅಹಮದ್ ಹೇಳಿದರು.

ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸೋಮವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ತಾಲ್ಲೂಕಿನಲ್ಲಿ ಬಂದ್‍ ಆಚರಿಸಲಾಗುವುದು’ ಎಂದರು.

ಕೇಂದ್ರ ಸರ್ಕಾರ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವ ಮುನ್ನ ಅದರ ಸಾಧಕ ಭಾಧಕಗಳ ಕುರಿತು ರೈತರೊಂದಿಗೆ ಚರ್ಚಿಸಬೇಕಿತ್ತು. ಆದರೆ ನೇರವಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗಿದೆ. ಸರ್ಕಾರ ಬಂಡವಾಳಶಾಹಿಗೆ ಅನುಕೂಲ ಮಾಡಿಕೊಡಲು ದೇಶದ ರೈತರನ್ನು ಬಲಿ ಕೊಡುತ್ತಿದೆ ಎಂದರು.

ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ರೈತ ಬಣದ ನಾಗೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT