<p><strong>ಗುಬ್ಬಿ:</strong> ಕಳೆದ ಬಾರಿ ಅತಿವೃಷ್ಟಿಯಾಗಿ ಬೆಳೆಯಾಗದಿದ್ದರೆ, ಈ ಬಾರಿ ಅನಾವೃಷ್ಟಿಯಿಂದ ಬೆಳೆ ಇಲ್ಲವಾಗಿದೆ. ಇದರಿಂದಾಗಿ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿ ಜಾನುವಾರುಗಳ ಮೇವಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಗ್ರಾಮೀಣ ಭಾಗದಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಸ್ಥಳೀಯವಾಗಿ ಮೇವು ದೊರಕದ ಕಾರಣ ಹೊರ ಜಿಲ್ಲೆಗಳಿಗೆ ಹೋಗುವಂತಾಗಿದೆ.</p>.<p>ಮೇವಿಗಾಗಿ ರಾಗಿ, ಜೋಳಗಳನ್ನೇ ನಂಬಿಕೊಂಡಿದ್ದ ರೈತರಿಗೆ ಮೇವಿನ ಬರದ ಬಿಸಿ ತಟ್ಟಿದೆ. ಕಳೆದ ಬಾರಿ ಒಂದು ಪೆಂಡಿ ಹುಲ್ಲಿಗೆ ₹150 ರಿಂದ ₹200 ಇದ್ದರೆ, ಈ ಬಾರಿ ₹350 ರಿಂದ ₹400 ಕೊಟ್ಟರೂ ಮೇವು ಸಿಗುತ್ತಿಲ್ಲ ಎಂದು ರೈತ ಕುಮಾರಸ್ವಾಮಿ ಹೇಳಿದರು.</p>.<p>ಯಾವ ಕಡೆಯೂ ಮಳೆ ಆಗದೇ ಇರುವುದರಿಂದ ಮೇವನ್ನು ಎಲ್ಲಿಂದ ತರುವುದು ಎಂಬ ಆತಂಕ ಕಾಡುತ್ತಿದೆ ಎನ್ನುತ್ತಾರೆ ರೈತ ಚಂದ್ರಶೇಖರ್.</p>.<p>ಬೆಸ್ಕಾಂ ಇಲಾಖೆ ರೈತರಿಗೆ ನಿಯಮಾನುಸಾರ ವಿದ್ಯುತ್ತನ್ನು ಸರಬರಾಜು ಮಾಡಿದರೆ ಜೋಳವನ್ನಾದರೂ ಬೆಳೆದು ರಾಸುಗಳನ್ನು ಉಳಿಸಿಕೊಳ್ಳಬಹುದು. ಆದರೆ ಯಾವಾಗ ವಿದ್ಯುತ್ ಕೊಡುವರೋ, ತೆಗೆಯುವರೋ ಒಂದು ತಿಳಿಯುತ್ತಿಲ್ಲ ಎನ್ನುತ್ತಾರೆ ರೈತ ರಮೇಶ್.</p>.<p>ಸರ್ಕಾರ ಶೀಘ್ರವಾಗಿ ಗೋದಾಮಗಳನ್ನು ತೆರೆಯಬೇಕು. ರೈತರಿಗೆ ಅಗತ್ಯವಿರುವ ಮೇವನ್ನು ಪೂರೈಸಬೇಕು ಎನ್ನುತ್ತಾರೆ ರೈತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಕಳೆದ ಬಾರಿ ಅತಿವೃಷ್ಟಿಯಾಗಿ ಬೆಳೆಯಾಗದಿದ್ದರೆ, ಈ ಬಾರಿ ಅನಾವೃಷ್ಟಿಯಿಂದ ಬೆಳೆ ಇಲ್ಲವಾಗಿದೆ. ಇದರಿಂದಾಗಿ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿ ಜಾನುವಾರುಗಳ ಮೇವಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಗ್ರಾಮೀಣ ಭಾಗದಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಸ್ಥಳೀಯವಾಗಿ ಮೇವು ದೊರಕದ ಕಾರಣ ಹೊರ ಜಿಲ್ಲೆಗಳಿಗೆ ಹೋಗುವಂತಾಗಿದೆ.</p>.<p>ಮೇವಿಗಾಗಿ ರಾಗಿ, ಜೋಳಗಳನ್ನೇ ನಂಬಿಕೊಂಡಿದ್ದ ರೈತರಿಗೆ ಮೇವಿನ ಬರದ ಬಿಸಿ ತಟ್ಟಿದೆ. ಕಳೆದ ಬಾರಿ ಒಂದು ಪೆಂಡಿ ಹುಲ್ಲಿಗೆ ₹150 ರಿಂದ ₹200 ಇದ್ದರೆ, ಈ ಬಾರಿ ₹350 ರಿಂದ ₹400 ಕೊಟ್ಟರೂ ಮೇವು ಸಿಗುತ್ತಿಲ್ಲ ಎಂದು ರೈತ ಕುಮಾರಸ್ವಾಮಿ ಹೇಳಿದರು.</p>.<p>ಯಾವ ಕಡೆಯೂ ಮಳೆ ಆಗದೇ ಇರುವುದರಿಂದ ಮೇವನ್ನು ಎಲ್ಲಿಂದ ತರುವುದು ಎಂಬ ಆತಂಕ ಕಾಡುತ್ತಿದೆ ಎನ್ನುತ್ತಾರೆ ರೈತ ಚಂದ್ರಶೇಖರ್.</p>.<p>ಬೆಸ್ಕಾಂ ಇಲಾಖೆ ರೈತರಿಗೆ ನಿಯಮಾನುಸಾರ ವಿದ್ಯುತ್ತನ್ನು ಸರಬರಾಜು ಮಾಡಿದರೆ ಜೋಳವನ್ನಾದರೂ ಬೆಳೆದು ರಾಸುಗಳನ್ನು ಉಳಿಸಿಕೊಳ್ಳಬಹುದು. ಆದರೆ ಯಾವಾಗ ವಿದ್ಯುತ್ ಕೊಡುವರೋ, ತೆಗೆಯುವರೋ ಒಂದು ತಿಳಿಯುತ್ತಿಲ್ಲ ಎನ್ನುತ್ತಾರೆ ರೈತ ರಮೇಶ್.</p>.<p>ಸರ್ಕಾರ ಶೀಘ್ರವಾಗಿ ಗೋದಾಮಗಳನ್ನು ತೆರೆಯಬೇಕು. ರೈತರಿಗೆ ಅಗತ್ಯವಿರುವ ಮೇವನ್ನು ಪೂರೈಸಬೇಕು ಎನ್ನುತ್ತಾರೆ ರೈತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>