ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಬಸ್ ಡಿಕ್ಕಿ: ತಂದೆ, ಮಗಳು ಸಾವು

Last Updated 29 ಜನವರಿ 2023, 18:03 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿಯ ಕಲ್ಕೆರೆ ಗೇಟ್ ಸಮೀಪದ ವೈ.ಕೆ.ರಾಮಯ್ಯ ವೃತ್ತದ ಬಳಿ ಭಾನುವಾರ ರಾತ್ರಿ ಬೈಕ್ ಮತ್ತು ಖಾಸಗಿ ಬಸ್ ಮಧ್ಯೆ ನಡೆದ ಅಪಘಾತದಲ್ಲಿ ತಂದೆ, ಮಗಳು ಮೃತಪಟ್ಟಿದ್ದಾರೆ.

ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಹೋಬಳಿ ನೆಟ್ಟಿಕೆರೆ ಗ್ರಾಮದ ತಿರುಮಲೇಗೌಡ( 50) ಮತ್ತು ಅವರ ಪುತ್ರಿ ಚಂದನ (20) ಮೃತ ದುರ್ದೈವಿಗಳು. ಬೆಂಗಳೂರಿನ ಸುಂಕದಕಟ್ಟೆಯಲ್ಲಿ ವಾಸವಿದ್ದರು.

ಹಬ್ಬದ ಪ್ರಯುಕ್ತ ಸ್ವಗ್ರಾಮಕ್ಕೆ ತೆರಳಿ, ಬೈಕ್ ನಲ್ಲಿ ವಾಪಸ್ ಬೆಂಗಳೂರಿಗೆ ಹೋಗುವಾಗ ತುಮಕೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ತಿರುಮಲೇಗೌಡ ಸ್ಥಳದಲ್ಲೇ‌ ಮೃತಪಟ್ಟಿದ್ದು, ಚಂದನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT