‘ತಾಲ್ಲೂಕು ಕಚೇರಿ, ಪುರಸಭೆ ಆವರಣ, ಡಿಡಿಪಿಐ ಕಚೇರಿ, ಡಿವೈಎಸ್ಪಿ ಕಚೇರಿ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಶಿರಾ ಗೇಟ್, ಪ್ರವಾಸಿ ಮಂದಿರ, ಕೆ.ಆರ್.ಬಡಾವಣೆ, ರಾಘವೇಂದ್ರ ಕಾಲೊನಿ, ಕರಡಿಪುರ, ಲಿಂಗೇನಹಳ್ಳಿ ಸೇರಿದಂತೆ ಬಹುತೇಕ ಭಾಗಗಳಲ್ಲಿ ಸೊಳ್ಳೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಖಾಲಿ ನಿವೇಶನಗಳಲ್ಲಿ ಅನುಪಯುಕ್ತ ಗಿಡಗಳು ಬೆಳೆದಿರುವುದರಿಂದ ಸೊಳ್ಳೆಗಳ ಉತ್ಪಾದನಾ ತಾಣಗಳಾಗಿವೆ. ಅನುಪಯುಕ್ತ ಗಿಡಗಳನ್ನು ತೆರವುಗೊಳಿಸುವಂತೆ ನಿವೇಶನ ಮಾಲೀಕರಿಗೆ ಪುರಸಭೆ ಅಧಿಕಾರಿಗಳು ನೋಟಿಸ್ ನೀಡಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.