<p><strong>ಮಧುಗಿರಿ:</strong> ಪಟ್ಟಣದ ಬಹುತೇಕ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ನೀರು ಸರಾಗವಾಗಿ ಹರಿಯದೇ ಇರುವುದರಿಂದ ವಾಸನೆ ಹಾಗೂ ಸೊಳ್ಳೆಗಳ ಹಾವಳಿಯಿಂದ ಜನರು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ.</p>.<p>ಪಟ್ಟಣದ ಡಿವೈಎಸ್ಪಿ ಕಚೇರಿ, ಡಿಡಿಪಿಐ ಕಚೇರಿ, ಸರ್ಕಾರಿ ಪದವಿಪೂರ್ವ ಕಾಲೇಜು ಮುಂಭಾಗ, ಪುರಸಭೆ ಕಚೇರಿ ಆವರಣ, ಕೆ.ಆರ್.ಬಡಾವಣೆಯ 16, 17, 18 ಮತ್ತು 19ನೇ ವಾರ್ಡ್ಗಳಲ್ಲಿ ದೊಡ್ಡ ಚರಂಡಿಗಳು ಹಾದು ಹೋಗಿವೆ. ಈ ಭಾಗದ ಚರಂಡಿಗಳಲ್ಲಿ ಹೂಳು ತುಂಬಿ, ಗಬ್ಬು ನಾರುತ್ತಿವೆ. ಚರಂಡಿಸ್ವಚ್ಛ ಮಾಡಿ ಹಲವು ವರ್ಷಗಳು ಕಳೆದಿವೆ.ಸ್ವಚ್ಛ ಮಾಡುವಂತೆ ಪುರಸಭೆ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಜನರ ದೂರು.</p>.<p>‘ಕಿಟಕಿ ಹಾಗೂ ಬಾಗಿಲು ತೆರೆದರೆ ದುರ್ವಾಸನೆ, ಸೊಳ್ಳೆಗಳ ಹಾವಳಿ ಅತಿಯಾಗಿದ್ದು, ಮಲೇರಿಯಾ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗುತ್ತದೆ. ಈಗಾಗಲೇ ಕೊರೊನಾ ಸೋಂಕಿನಿಂದ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೊಳ್ಳೆಗಳ ಕಾಟದಿಂದ ಮಲೇರಿಯಾ ಮತ್ತು ಡೆಂಗಿ ಜ್ವರದ ಪ್ರಕರಣಗಳು ಹೆಚ್ಚಾದರೆ, ಜನರು ಬದುಕುವುದೇ ಕಷ್ಟವಾಗುತ್ತದೆ’ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿಇತ್ತೀಚೆಗೆ ಸುರಿದ ಮಳೆಯಿಂದಾಗಿ ಸರ್ಕಾರಿ ಸ್ಥಳ, ಪಾದಚಾರಿ ರಸ್ತೆಗಳಲ್ಲಿ ಹಾಗೂ ಖಾಸಗಿ ನಿವೇಶನಗಳಲ್ಲಿ ಪಾರ್ಥೇನಿಯಂ ಹಾಗೂ ಇತರೆ ಗಿಡ-ಗಂಟೆಗಳು ಎತ್ತರಕ್ಕೆ ಬೆಳೆದು ಹಂದಿ, ಹಾವು ಮತ್ತು ಕ್ರಿಮಿಕೀಟಗಳ ಆವಾಸ ಕೇಂದ್ರಗಳಾಗಿವೆ.</p>.<p>‘ತಾಲ್ಲೂಕು ಕಚೇರಿ, ಪುರಸಭೆ ಆವರಣ, ಡಿಡಿಪಿಐ ಕಚೇರಿ, ಡಿವೈಎಸ್ಪಿ ಕಚೇರಿ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಶಿರಾ ಗೇಟ್, ಪ್ರವಾಸಿ ಮಂದಿರ, ಕೆ.ಆರ್.ಬಡಾವಣೆ, ರಾಘವೇಂದ್ರ ಕಾಲೊನಿ, ಕರಡಿಪುರ, ಲಿಂಗೇನಹಳ್ಳಿ ಸೇರಿದಂತೆ ಬಹುತೇಕ ಭಾಗಗಳಲ್ಲಿ ಸೊಳ್ಳೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಖಾಲಿ ನಿವೇಶನಗಳಲ್ಲಿ ಅನುಪಯುಕ್ತ ಗಿಡಗಳು ಬೆಳೆದಿರುವುದರಿಂದ ಸೊಳ್ಳೆಗಳ ಉತ್ಪಾದನಾ ತಾಣಗಳಾಗಿವೆ. ಅನುಪಯುಕ್ತ ಗಿಡಗಳನ್ನು ತೆರವುಗೊಳಿಸುವಂತೆ ನಿವೇಶನ ಮಾಲೀಕರಿಗೆ ಪುರಸಭೆ ಅಧಿಕಾರಿಗಳು ನೋಟಿಸ್ ನೀಡಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p>‘ಪುರಸಭೆ ವ್ಯಾಪ್ತಿಯಲ್ಲಿರುವ ದೊಡ್ಡ ಚರಂಡಿಗಳಸ್ವಚ್ಛತೆಗೆ ಪುರಸಭೆ ಅಧಿಕಾರಿಗಳು ಹೆಚ್ಚಿನಆದ್ಯತೆ ನೀಡಬೇಕು. ಸಾರ್ವಜನಿಕ ಸ್ಥಳ ಹಾಗೂ ಪಾದಚಾರಿ ರಸ್ತೆಗಳಲ್ಲಿ ಬೆಳೆದಿರುವ ಅನುಪಯುಕ್ತ ಗಿಡಗಳನ್ನು ತೆರವುಗೊಳಿಸಬೇಕು’ ಎಂದುನಾಗರಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ಪಟ್ಟಣದ ಬಹುತೇಕ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ನೀರು ಸರಾಗವಾಗಿ ಹರಿಯದೇ ಇರುವುದರಿಂದ ವಾಸನೆ ಹಾಗೂ ಸೊಳ್ಳೆಗಳ ಹಾವಳಿಯಿಂದ ಜನರು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ.</p>.<p>ಪಟ್ಟಣದ ಡಿವೈಎಸ್ಪಿ ಕಚೇರಿ, ಡಿಡಿಪಿಐ ಕಚೇರಿ, ಸರ್ಕಾರಿ ಪದವಿಪೂರ್ವ ಕಾಲೇಜು ಮುಂಭಾಗ, ಪುರಸಭೆ ಕಚೇರಿ ಆವರಣ, ಕೆ.ಆರ್.ಬಡಾವಣೆಯ 16, 17, 18 ಮತ್ತು 19ನೇ ವಾರ್ಡ್ಗಳಲ್ಲಿ ದೊಡ್ಡ ಚರಂಡಿಗಳು ಹಾದು ಹೋಗಿವೆ. ಈ ಭಾಗದ ಚರಂಡಿಗಳಲ್ಲಿ ಹೂಳು ತುಂಬಿ, ಗಬ್ಬು ನಾರುತ್ತಿವೆ. ಚರಂಡಿಸ್ವಚ್ಛ ಮಾಡಿ ಹಲವು ವರ್ಷಗಳು ಕಳೆದಿವೆ.ಸ್ವಚ್ಛ ಮಾಡುವಂತೆ ಪುರಸಭೆ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಜನರ ದೂರು.</p>.<p>‘ಕಿಟಕಿ ಹಾಗೂ ಬಾಗಿಲು ತೆರೆದರೆ ದುರ್ವಾಸನೆ, ಸೊಳ್ಳೆಗಳ ಹಾವಳಿ ಅತಿಯಾಗಿದ್ದು, ಮಲೇರಿಯಾ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗುತ್ತದೆ. ಈಗಾಗಲೇ ಕೊರೊನಾ ಸೋಂಕಿನಿಂದ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೊಳ್ಳೆಗಳ ಕಾಟದಿಂದ ಮಲೇರಿಯಾ ಮತ್ತು ಡೆಂಗಿ ಜ್ವರದ ಪ್ರಕರಣಗಳು ಹೆಚ್ಚಾದರೆ, ಜನರು ಬದುಕುವುದೇ ಕಷ್ಟವಾಗುತ್ತದೆ’ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿಇತ್ತೀಚೆಗೆ ಸುರಿದ ಮಳೆಯಿಂದಾಗಿ ಸರ್ಕಾರಿ ಸ್ಥಳ, ಪಾದಚಾರಿ ರಸ್ತೆಗಳಲ್ಲಿ ಹಾಗೂ ಖಾಸಗಿ ನಿವೇಶನಗಳಲ್ಲಿ ಪಾರ್ಥೇನಿಯಂ ಹಾಗೂ ಇತರೆ ಗಿಡ-ಗಂಟೆಗಳು ಎತ್ತರಕ್ಕೆ ಬೆಳೆದು ಹಂದಿ, ಹಾವು ಮತ್ತು ಕ್ರಿಮಿಕೀಟಗಳ ಆವಾಸ ಕೇಂದ್ರಗಳಾಗಿವೆ.</p>.<p>‘ತಾಲ್ಲೂಕು ಕಚೇರಿ, ಪುರಸಭೆ ಆವರಣ, ಡಿಡಿಪಿಐ ಕಚೇರಿ, ಡಿವೈಎಸ್ಪಿ ಕಚೇರಿ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಶಿರಾ ಗೇಟ್, ಪ್ರವಾಸಿ ಮಂದಿರ, ಕೆ.ಆರ್.ಬಡಾವಣೆ, ರಾಘವೇಂದ್ರ ಕಾಲೊನಿ, ಕರಡಿಪುರ, ಲಿಂಗೇನಹಳ್ಳಿ ಸೇರಿದಂತೆ ಬಹುತೇಕ ಭಾಗಗಳಲ್ಲಿ ಸೊಳ್ಳೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಖಾಲಿ ನಿವೇಶನಗಳಲ್ಲಿ ಅನುಪಯುಕ್ತ ಗಿಡಗಳು ಬೆಳೆದಿರುವುದರಿಂದ ಸೊಳ್ಳೆಗಳ ಉತ್ಪಾದನಾ ತಾಣಗಳಾಗಿವೆ. ಅನುಪಯುಕ್ತ ಗಿಡಗಳನ್ನು ತೆರವುಗೊಳಿಸುವಂತೆ ನಿವೇಶನ ಮಾಲೀಕರಿಗೆ ಪುರಸಭೆ ಅಧಿಕಾರಿಗಳು ನೋಟಿಸ್ ನೀಡಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p>‘ಪುರಸಭೆ ವ್ಯಾಪ್ತಿಯಲ್ಲಿರುವ ದೊಡ್ಡ ಚರಂಡಿಗಳಸ್ವಚ್ಛತೆಗೆ ಪುರಸಭೆ ಅಧಿಕಾರಿಗಳು ಹೆಚ್ಚಿನಆದ್ಯತೆ ನೀಡಬೇಕು. ಸಾರ್ವಜನಿಕ ಸ್ಥಳ ಹಾಗೂ ಪಾದಚಾರಿ ರಸ್ತೆಗಳಲ್ಲಿ ಬೆಳೆದಿರುವ ಅನುಪಯುಕ್ತ ಗಿಡಗಳನ್ನು ತೆರವುಗೊಳಿಸಬೇಕು’ ಎಂದುನಾಗರಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>