ಜಿಲ್ಲೆಯ 11 ಜನ ನೂತನ ಶಾಸಕರನ್ನು ಸನ್ಮಾನಿಸಲಾಗುತ್ತದೆ. ಸಂಸದರಾದ ಜಿ.ಎಸ್.ಬಸವರಾಜು, ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರನ್ನೂ ಗೌರವಿಸಲಾಗುತ್ತದೆ. ಸುಮಾರು 15 ಸಾವಿರ ಜನ ಸೇರಬಹುದು ಎಂಬ ನಿರೀಕ್ಷೆ ಇದೆ ಎಂದು ಟಿಎಂಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜಿಲ್ಲಾ ಸಹಕಾರಿಗಳ ಅಭಿನಂದನಾ ಸಮಿತಿ ಅಧ್ಯಕ್ಷ ಎನ್.ಎಸ್.ಜಯಕುಮಾರ್ ಇಲ್ಲಿ ಶುಕ್ರವಾರ ಹೇಳಿದರು.