<p><strong>ತುಮಕೂರು:</strong> ತಾಲ್ಲೂಕಿನ ಗೂಳೂರು ಹೋಬಳಿ ರೈತರಪಾಳ್ಯದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 3ರಿಂದ 4 ವರ್ಷದ ಹೆಣ್ಣು ಚಿರತೆ ಮಂಗಳವಾರ ರಾತ್ರಿ ಬಿದ್ದಿದೆ.</p>.<p>ಕಳೆದ ಕೆಲ ದಿನಗಳಿಂದ ರೈತರಪಾಳ್ಯ, ಹರಳೂರು, ಜೋಲಮಾರನಹಳ್ಳಿ ಗ್ರಾಮಗಳ ಸುತ್ತಮುತ್ತ ಚಿರತೆ ಕಾಣಿಸಿಕೊಂಡು ಭೀತಿ ಮೂಡಿಸಿತ್ತು. ಗ್ರಾಮಗಳಿಗೆ ನುಗ್ಗಿ ನಾಯಿ, ಮೇಕೆ, ಕುರಿ, ದನಕರುಗಳನ್ನು ತಿಂದು ಹಾಕಿತ್ತು. ಗ್ರಾಮಗಳ ಜನರು, ರೈತರು ಓಡಾಡಲು ಭಯಪಟ್ಟಿದ್ದರು. ಹೊಲ, ತೋಟಗಳಿಗೆ ಹೋಗಲು ಹೆದರುತ್ತಿದ್ದರು.</p>.<p>ಚಿರತೆ ಸೆರೆ ಹಿಡಿಯುವಂತೆ ಈ ಭಾಗದ ಜನರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಆರಂಭದಲ್ಲಿ ರೈತರ ಪಾಳ್ಯದ ಮನೆಯೊಂದರ ಹಿಂಭಾಗ ಬೋನ್ ಇಡಲಾಗಿತ್ತು. ಆದರೆ ಅಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಬೀಳದ ಕಾರಣ ಮತ್ತೆ ಗ್ರಾಮದ ರೈತರೊಬ್ಬರ ಜಮೀನಿನ ಸಮೀಪ ಕಳೆದ ಒಂದು ವಾರದಿಂದ ಇಡಲಾಗಿತ್ತು.</p>.<p>ಬೋನಿಗೆ ಬಿದ್ದ ಚಿರತೆ ನೋಡಲು ರೈತರಪಾಳ್ಯ, ಹರಳೂರು, ಜೋಲಮಾರನಹಳ್ಳಿ ಸುತ್ತಮುತ್ತಲಿನ ಹಳ್ಳಿಗಳ ಜನರು ತಂಡೋಪ ತಂಡವಾಗಿ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಾಲ್ಲೂಕಿನ ಗೂಳೂರು ಹೋಬಳಿ ರೈತರಪಾಳ್ಯದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 3ರಿಂದ 4 ವರ್ಷದ ಹೆಣ್ಣು ಚಿರತೆ ಮಂಗಳವಾರ ರಾತ್ರಿ ಬಿದ್ದಿದೆ.</p>.<p>ಕಳೆದ ಕೆಲ ದಿನಗಳಿಂದ ರೈತರಪಾಳ್ಯ, ಹರಳೂರು, ಜೋಲಮಾರನಹಳ್ಳಿ ಗ್ರಾಮಗಳ ಸುತ್ತಮುತ್ತ ಚಿರತೆ ಕಾಣಿಸಿಕೊಂಡು ಭೀತಿ ಮೂಡಿಸಿತ್ತು. ಗ್ರಾಮಗಳಿಗೆ ನುಗ್ಗಿ ನಾಯಿ, ಮೇಕೆ, ಕುರಿ, ದನಕರುಗಳನ್ನು ತಿಂದು ಹಾಕಿತ್ತು. ಗ್ರಾಮಗಳ ಜನರು, ರೈತರು ಓಡಾಡಲು ಭಯಪಟ್ಟಿದ್ದರು. ಹೊಲ, ತೋಟಗಳಿಗೆ ಹೋಗಲು ಹೆದರುತ್ತಿದ್ದರು.</p>.<p>ಚಿರತೆ ಸೆರೆ ಹಿಡಿಯುವಂತೆ ಈ ಭಾಗದ ಜನರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಆರಂಭದಲ್ಲಿ ರೈತರ ಪಾಳ್ಯದ ಮನೆಯೊಂದರ ಹಿಂಭಾಗ ಬೋನ್ ಇಡಲಾಗಿತ್ತು. ಆದರೆ ಅಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಬೀಳದ ಕಾರಣ ಮತ್ತೆ ಗ್ರಾಮದ ರೈತರೊಬ್ಬರ ಜಮೀನಿನ ಸಮೀಪ ಕಳೆದ ಒಂದು ವಾರದಿಂದ ಇಡಲಾಗಿತ್ತು.</p>.<p>ಬೋನಿಗೆ ಬಿದ್ದ ಚಿರತೆ ನೋಡಲು ರೈತರಪಾಳ್ಯ, ಹರಳೂರು, ಜೋಲಮಾರನಹಳ್ಳಿ ಸುತ್ತಮುತ್ತಲಿನ ಹಳ್ಳಿಗಳ ಜನರು ತಂಡೋಪ ತಂಡವಾಗಿ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>