ಈ ಸಲ ಉತ್ತಮ ಮಳೆಯಾಗಿರುವುದರಿಂದ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಬೆಳೆಗೆ ಮೇಲು ಗೊಬ್ಬರವಾಗಿ ಯೂರಿಯಾ ನೀಡಬೇಕಿದ್ದು, ಗೊಬ್ಬರ ಸಿಗದೆ ರೈತರು ಪರದಾಡುತ್ತಿದ್ದಾರೆ. ಗೊಬ್ಬರ ಹಾಕುವುದು ತಡವಾದಷ್ಟು ಬೆಳೆ ಇಳುವರಿಯಲ್ಲಿ ಕುಂಟಿತವಾಗುತ್ತದೆ. ಹಾಗಾಗಿ ಅನೇಕರು ಗೊಬ್ಬರಕ್ಕೆ ಪರದಾಡುತ್ತಿದ್ದಾರೆ. ಖಾಸಗಿ ಅಂಗಡಿಗಳ ಮುಂದೆ ಕಾದು ಸುಸ್ತಾಗುತ್ತಿದ್ದಾರೆ ಎಂದು ಯುವ ಮುಖಂಡ ಹೆಬ್ಬೂರು ನಾಗೇಶ್ ಅಸಮಾಧಾನ ವ್ಯಕ್ತಪಡಿಸಿದರು.