ಶ್ರೀಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆಯ ಸಮಯದಲ್ಲಿ ಡಿ.ಜೆ ಹಾಕಿಕೊಂಡು ಕುಣಿಯುತ್ತಿದ್ದು ಅಲ್ಲಿಗೆ ಬಂದ ಗೋವಿಂದರಾಜು ಎಂಬುವರು ತನಗೆ ಬೇಕಾದ ಹಾಡನ್ನು ಹಾಕುವಂತೆ ಹೇಳಿದ್ದಾರೆ. ಅವರ ಮಾತಿಗೆ ಮನ್ನಣೆ ಸಿಗದ ಹಿನ್ನೆಲೆಯಲ್ಲಿ ಡಿಜೆಯನ್ನು ಸ್ಥಗಿತಗೊಳಿಸಲು ಮುಂದಾದ ಸಮಯದಲ್ಲಿ ಅಲ್ಲಿದ್ದ ಯುವಕರ ಜೊತೆ ಮಾತಿನ ಚಕಮುಕಿ ನಡೆದಿದೆ. ಈ ಸಮಯದಲ್ಲಿ ಯುವಕರು ಗೋವಿಂದರಾಜು ಮೇಲೆ ಹಲ್ಲೆ ನಡೆಸಿದ್ದಾರೆ.