ದಾಖಲೆ ಸರಿಪಡಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೈಕೋರ್ಟ್ ಮತ್ತು ಲೋಕಾಯುಕ್ತಾ ನ್ಯಾಯಾಲಯಗಳಿಗೆ ಮನವಿ ಸಲ್ಲಿಸಿದಾಗ, ಲೋಕಾಯುಕ್ತಾ ನ್ಯಾಯಾಲಯದಲ್ಲಿ ನಿಗದಿತ ಅವಧಿಯಲ್ಲಿ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಿದ ಮೇರೆಗೆ ಸಾಗುವಳಿ ಚೀಟಿ ನೀಡುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಆದರೆ ಅಸ್ತವ್ಯಸ್ತಗೊಂಡಿದ್ದ ದಾಖಲೆ ಸರಿಪಡಿಸಿಲ್ಲ. ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದು, 2019ರಲ್ಲಿ ಆಯೋಗ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಜಿಲ್ಲಾಧಿಕಾರಿ ತಹಶೀಲ್ದಾರ್ಗೆ ಸೂಚನೆನೀಡಿದ್ದಾರೆ.