ಗುಬ್ಬಿ ತಾಲ್ಲೂಕು ಕಡಬ ಗ್ರಾ.ಪಂ ವ್ಯಾಪ್ತಿಯ ಕಾಡಶೆಟ್ಟಿಹಳ್ಳಿ ಕ್ಷೇತ್ರದಿಂದ ಸತತವಾಗಿ ಮೂರನೇ ಬಾರಿಗೆ ಪಂಚಾಯಿತಿ ಸದಸ್ಯರಾಗಿ ಸತೀಶ್ ಆಯ್ಕೆ ಆಗುವ ಮೂಲಕ ಗಮನ ಸೆಳೆದಿದ್ದಾರೆ. ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ರಾಜ್ಯ ಕಾರ್ಯದರ್ಶಿಯೂ ಆಗಿರುವ ಸತೀಶ್, ಗ್ರಾಮದ ಶಾಲೆಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಪಂಚಾಯಿತಿ ವ್ಯವಸ್ಥೆ ಸಬಲೀಕರಣಕ್ಕೆ ರಾಜ್ಯದಲ್ಲಿ ಪ್ರಮುಖವಾಗಿ ಕೆಲಸ ಮಾಡುತ್ತಿರುವವರಲ್ಲಿ ಇವರೂ ಒಬ್ಬರಾಗಿದ್ದಾರೆ.