‘ಕರೆ ಮಾಡಿದ ವ್ಯಕ್ತಿಯು ಲೋಕಾಯುಕ್ತ ಉಪಾಧೀಕ್ಷಕ ಉಮಾಮಹೇಶ್ ಎಂಬ ಹೆಸರಿನಿಂದ ಪರಿಚಯಿಸಿಕೊಂಡು ₹50 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಲ್ಲದಿದ್ದರೆ ಲೋಕಾಯುಕ್ತ ಪೊಲೀಸರು ದಾಳಿ ಮಾಡುತ್ತಾರೆ ಎಂದು ಬೆದರಿಸಿದ್ದಾರೆ. ನನಗೆ 12 ಬಾರಿ, ನನ್ನ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಿಗೆ 5 ಬಾರಿ ಕರೆ ಮಾಡಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ’ ಎಂದು ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.