<p><strong>ತುಮಕೂರು:</strong> ತಾಲ್ಲೂಕಿನ ಹೆಗ್ಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಆರ್.ರಾಘವೇಂದ್ರ ಸುಮಾರು ₹50 ಲಕ್ಷ ತೆರಿಗೆ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹರ್ಷಕುಮಾರ್ ದೂರು ನೀಡಿದ್ದಾರೆ.</p>.<p>ರಾಘವೇಂದ್ರ ವಿರುದ್ಧ ಐಪಿಸಿ ಕಲಂ 420 (ವಂಚನೆ) ಸೇರಿದಂತೆ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ. ಹಣ ದುರುಪಯೋಗ, ಕರ್ತವ್ಯ ಲೋಪ, ನಿರ್ಲಕ್ಷ್ಯದ ಆರೋಪದ ಮೇರೆಗೆ ಪಿಡಿಒ ರಾಘವೇಂದ್ರ, ಗ್ರೇಡ್–2 ಕಾರ್ಯದರ್ಶಿ ಎಚ್.ಸಿ.ಹನುಮಂತರಾಜು ಅವರನ್ನು ಅಮಾನತುಗೊಳಿಸಲಾಗಿದೆ. </p>.<p>‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಪಂಚತಂತ್ರ–2.0 ತಂತ್ರಾಂಶದಲ್ಲಿ ಸಾರ್ವಜನಿಕರಿಂದ ಆಸ್ತಿ ತೆರಿಗೆ ಮತ್ತು ಇತರ ಶುಲ್ಕಗಳಿಂದ ಸಂಗ್ರಹವಾದ ಮೊತ್ತವನ್ನು ಹೆಗ್ಗೆರೆ ಗ್ರಾ.ಪಂ ವರ್ಗ–2ರ ಬ್ಯಾಂಕ್ ಖಾತೆಗೆ ಜಮಾ ಮಾಡಿಲ್ಲ. ಈ ಹಣವನ್ನು ಪಿಡಿಒ ಮತ್ತು ಸಿಬ್ಬಂದಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ’ ಎಂದು ತಾ.ಪಂ. ಇ.ಒ ಹರ್ಷಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ. </p>.<p>‘2022–23ನೇ ಸಾಲಿನಿಂದ ಸೃಜನೆಯಾದ 1,030 ಆಸ್ತಿ ತೆರಿಗೆ ಮತ್ತು ಇತರ ಶುಲ್ಕದ ರಸೀದಿಗಳನ್ನು ಅನಧಿಕೃತವಾಗಿ ರದ್ದುಪಡಿಸಿದ್ದಾರೆ. ತೆರಿಗೆ ರೂಪದಲ್ಲಿ ಸಂಗ್ರಹವಾದ ಸುಮಾರು ₹50 ಲಕ್ಷ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡು, ಸಾರ್ವಜನಿಕರ ತೆರಿಗೆ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪಿಡಿಒ, ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಾಲ್ಲೂಕಿನ ಹೆಗ್ಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಆರ್.ರಾಘವೇಂದ್ರ ಸುಮಾರು ₹50 ಲಕ್ಷ ತೆರಿಗೆ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹರ್ಷಕುಮಾರ್ ದೂರು ನೀಡಿದ್ದಾರೆ.</p>.<p>ರಾಘವೇಂದ್ರ ವಿರುದ್ಧ ಐಪಿಸಿ ಕಲಂ 420 (ವಂಚನೆ) ಸೇರಿದಂತೆ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ. ಹಣ ದುರುಪಯೋಗ, ಕರ್ತವ್ಯ ಲೋಪ, ನಿರ್ಲಕ್ಷ್ಯದ ಆರೋಪದ ಮೇರೆಗೆ ಪಿಡಿಒ ರಾಘವೇಂದ್ರ, ಗ್ರೇಡ್–2 ಕಾರ್ಯದರ್ಶಿ ಎಚ್.ಸಿ.ಹನುಮಂತರಾಜು ಅವರನ್ನು ಅಮಾನತುಗೊಳಿಸಲಾಗಿದೆ. </p>.<p>‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಪಂಚತಂತ್ರ–2.0 ತಂತ್ರಾಂಶದಲ್ಲಿ ಸಾರ್ವಜನಿಕರಿಂದ ಆಸ್ತಿ ತೆರಿಗೆ ಮತ್ತು ಇತರ ಶುಲ್ಕಗಳಿಂದ ಸಂಗ್ರಹವಾದ ಮೊತ್ತವನ್ನು ಹೆಗ್ಗೆರೆ ಗ್ರಾ.ಪಂ ವರ್ಗ–2ರ ಬ್ಯಾಂಕ್ ಖಾತೆಗೆ ಜಮಾ ಮಾಡಿಲ್ಲ. ಈ ಹಣವನ್ನು ಪಿಡಿಒ ಮತ್ತು ಸಿಬ್ಬಂದಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ’ ಎಂದು ತಾ.ಪಂ. ಇ.ಒ ಹರ್ಷಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ. </p>.<p>‘2022–23ನೇ ಸಾಲಿನಿಂದ ಸೃಜನೆಯಾದ 1,030 ಆಸ್ತಿ ತೆರಿಗೆ ಮತ್ತು ಇತರ ಶುಲ್ಕದ ರಸೀದಿಗಳನ್ನು ಅನಧಿಕೃತವಾಗಿ ರದ್ದುಪಡಿಸಿದ್ದಾರೆ. ತೆರಿಗೆ ರೂಪದಲ್ಲಿ ಸಂಗ್ರಹವಾದ ಸುಮಾರು ₹50 ಲಕ್ಷ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡು, ಸಾರ್ವಜನಿಕರ ತೆರಿಗೆ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪಿಡಿಒ, ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>