<p><strong>ಹುಳಿಯಾರು</strong>: ರಸ್ತೆ ಅಪಘಾತದಿಂದಾಗಿ ನಿಧನರಾದ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರ ಪಂಚನಹಳ್ಳಿಗೆ ತೆರಳುವ ಮಾರ್ಗಮಧ್ಯೆ ಪಟ್ಟಣದಲ್ಲಿ ನೂರಾರು ಜನರು ಅಂತಿಮ ನಮನ ಸಲ್ಲಿಸಿದರು.</p>.<p>ಮಧ್ಯಾಹ್ನ 1 ಗಂಟೆಗೆ ಪಾರ್ಥಿವ ಶರೀರ ಬರುವ ಮುನ್ಸೂಚನೆಯಿಂದ 12 ಗಂಟೆಯಿಂದಲೇ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ಹುಳಿಯಾರು ಪೊಲೀಸ್ ಠಾಣೆ ವೃತ್ತದಲ್ಲಿ ಕಾದು ನಿಂತಿದ್ದರು. ನಿರೀಕ್ಷೆಗೂ ಮೀರಿ ಅಭಿಮಾನಿಗಳು ಸೇರಿದ್ದರಿಂದ ಎಲ್ಲಿರಿಗೂ ಅವಕಾಶ ಕಲ್ಪಿಸುವುದು ಕಷ್ಟವಾಯಿತು.</p>.<p>ನೀನಾಸಂ ಸತೀಶ್ ಮಾತನಾಡಿ, ನಿಗದಿತ ಸಮಯಕ್ಕೆ ಅಂತಿಮ ಸಂಸ್ಕಾರ ಮುಗಿಸಬೇಕಾಗಿರುವುದರಿಂದ ಕೇವಲ 5 ನಿಮಿಷ ಅವಕಾಶ ನೀಡುತ್ತೇವೆ. ಒಬ್ಬರು ಮಾತ್ರ ದರ್ಶನ ಪಡೆದು ಎಲ್ಲರೂ ನಿಂತಲ್ಲಿಯೇ ಅಂತಿಮ ನಮನ ಸಲ್ಲಿಸುವಂತೆ ಮನವಿ ಮಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಕಡೂರು ಮಾಜಿ ಶಾಸಕ ವೈ.ಎಸ್.ವಿ.ದತ್ತ ಕೂಡ ಪಾರ್ಥಿವ ಶರೀರದೊಟ್ಟಿಗೆ ಹುಳಿಯಾರಿಗೆ ಬಂದಿದ್ದರು.</p>.<p>ಹೋಬಳಿಯ ಹೊಯ್ಸಳಕಟ್ಟೆ ಗೇಟ್ನಲ್ಲಿಯೂ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರಕ್ಕೆ ಅಂತಿನ ನಮನ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು</strong>: ರಸ್ತೆ ಅಪಘಾತದಿಂದಾಗಿ ನಿಧನರಾದ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರ ಪಂಚನಹಳ್ಳಿಗೆ ತೆರಳುವ ಮಾರ್ಗಮಧ್ಯೆ ಪಟ್ಟಣದಲ್ಲಿ ನೂರಾರು ಜನರು ಅಂತಿಮ ನಮನ ಸಲ್ಲಿಸಿದರು.</p>.<p>ಮಧ್ಯಾಹ್ನ 1 ಗಂಟೆಗೆ ಪಾರ್ಥಿವ ಶರೀರ ಬರುವ ಮುನ್ಸೂಚನೆಯಿಂದ 12 ಗಂಟೆಯಿಂದಲೇ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ಹುಳಿಯಾರು ಪೊಲೀಸ್ ಠಾಣೆ ವೃತ್ತದಲ್ಲಿ ಕಾದು ನಿಂತಿದ್ದರು. ನಿರೀಕ್ಷೆಗೂ ಮೀರಿ ಅಭಿಮಾನಿಗಳು ಸೇರಿದ್ದರಿಂದ ಎಲ್ಲಿರಿಗೂ ಅವಕಾಶ ಕಲ್ಪಿಸುವುದು ಕಷ್ಟವಾಯಿತು.</p>.<p>ನೀನಾಸಂ ಸತೀಶ್ ಮಾತನಾಡಿ, ನಿಗದಿತ ಸಮಯಕ್ಕೆ ಅಂತಿಮ ಸಂಸ್ಕಾರ ಮುಗಿಸಬೇಕಾಗಿರುವುದರಿಂದ ಕೇವಲ 5 ನಿಮಿಷ ಅವಕಾಶ ನೀಡುತ್ತೇವೆ. ಒಬ್ಬರು ಮಾತ್ರ ದರ್ಶನ ಪಡೆದು ಎಲ್ಲರೂ ನಿಂತಲ್ಲಿಯೇ ಅಂತಿಮ ನಮನ ಸಲ್ಲಿಸುವಂತೆ ಮನವಿ ಮಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಕಡೂರು ಮಾಜಿ ಶಾಸಕ ವೈ.ಎಸ್.ವಿ.ದತ್ತ ಕೂಡ ಪಾರ್ಥಿವ ಶರೀರದೊಟ್ಟಿಗೆ ಹುಳಿಯಾರಿಗೆ ಬಂದಿದ್ದರು.</p>.<p>ಹೋಬಳಿಯ ಹೊಯ್ಸಳಕಟ್ಟೆ ಗೇಟ್ನಲ್ಲಿಯೂ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರಕ್ಕೆ ಅಂತಿನ ನಮನ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>