ಚಿಕ್ಕನಾಯಕನಹಳ್ಳಿ: ಗುಣಮಟ್ಟದ ಹಾಲು ನೀಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಎಲ್.ಬಿ.ಪ್ರೇಮಾನಂದ ರೈತರಿಗೆ ಮನವಿ ಮಾಡಿದರು.
ಬೈಲಪ್ಪನ ಮಠ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಮ ಕಲ್ಯಾಣ ಯೋಜನೆಯಡಿ ಮಂಜೂರಾದ ₹1.5 ಲಕ್ಷದ ಆದೇಶ ಪತ್ರವನ್ನು ಸಂಘದ ಅಧ್ಯಕ್ಷ ಉಮೇಶ್ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.
ಯೋಜನೆ ಮೇಲ್ವಿಚಾರಕ ಭಾಸ್ಕರ್, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಸೇವಾಪ್ರತಿನಿಧಿ ಭಾರತಿ ಉಪಸ್ಥಿತರಿದ್ದರು.