<p><strong>ತುಮಕೂರು</strong>: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮರು ಚಿಂತನೆ ನಡೆಸುವಂತೆ ಸಚಿವರೇ ಹೇಳುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ ಹೇಳಿದ್ದಾರೆ.</p>.<p>ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ನಲ್ಲಿ ದ್ವಂದ್ವ ನಿಲುವು ವ್ಯಕ್ತವಾಗಿದ್ದು, ರಾಜ್ಯ ಆರ್ಥಿಕವಾಗಿ ದಿವಾಳಿ ಅಂಚಿಗೆ ತಲುಪಿರುವುದು ಇದರಿಂದ ಗೊತ್ತಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಅನೇಕರು ಹೇಳಿದ್ದರು. ಆದರೆ 15 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವನ್ನು ಕಿವಿಯ ಮೇಲೆ ಹಾಕಿಕೊಳ್ಳಲಿಲ್ಲ. ಈಗಲೂ ಅವರು ತಮ್ಮ ಪಕ್ಷದ ಹಿರಿಯ ಸಚಿವರ ಅಭಿಪ್ರಾಯಗಳಿಗೂ ಕಿವಿಗೊಡುತ್ತಿಲ್ಲ. ಇದೆಲ್ಲವನ್ನು ಗಮನಿಸಿದರೆ ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಡುವುದನ್ನು ಕಣ್ಣಾರೆ ಕಾಣಲು ನಿರ್ಧರಿಸಿದಂತೆ ಕಾಣುತ್ತದೆ ಎಂದು ಆರೋಪಿಸಿದ್ದಾರೆ.</p>.<p>ಈ ವಿಚಾರಗಳಲ್ಲಿ ಮರುಚಿಂತನೆ ನಡೆಯಬೇಕಾದ ಅಗತ್ಯವನ್ನು ಸರ್ಕಾರ ಮನಗಾಣಬೇಕಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಹಣ ತರಲಾಗದೆ, ಜನರಿಗೆ ಮುಖ ತೋರಿಸದಂತಹ ಸ್ಥಿತಿಯಲ್ಲಿ ಶಾಸಕರು ಇದ್ದಾರೆ. ರಾಜ್ಯದಲ್ಲಿ ಇಂತಹ ದಯನೀಯ ಸ್ಥಿತಿ ಎಂದೂ ಬಂದಿರಲಿಲ್ಲ. ಇದಕ್ಕೆ ನೇರವಾಗಿ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಅವರು ದೂರಿದ್ದಾರೆ.</p>.<p>ತುಂಗಭದ್ರಾ ಜಲಾಶಯದಲ್ಲಿ 19ನೇ ಗೇಟ್ ಕುಸಿದಿರುವುದು ನೋಡಿದರೆ ನೀರಾವರಿ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತದೆ. ರಾಜ್ಯದ ಎಲ್ಲ ಅಣೆಕಟ್ಟೆಗಳ ಸುರಕ್ಷತೆ ಬಗ್ಗೆ ಉನ್ನತ ಮಟ್ಟದಲ್ಲಿ ತಜ್ಞರಿಂದ ಅಧ್ಯಯನ ನಡೆಸುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮರು ಚಿಂತನೆ ನಡೆಸುವಂತೆ ಸಚಿವರೇ ಹೇಳುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ ಹೇಳಿದ್ದಾರೆ.</p>.<p>ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ನಲ್ಲಿ ದ್ವಂದ್ವ ನಿಲುವು ವ್ಯಕ್ತವಾಗಿದ್ದು, ರಾಜ್ಯ ಆರ್ಥಿಕವಾಗಿ ದಿವಾಳಿ ಅಂಚಿಗೆ ತಲುಪಿರುವುದು ಇದರಿಂದ ಗೊತ್ತಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಅನೇಕರು ಹೇಳಿದ್ದರು. ಆದರೆ 15 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವನ್ನು ಕಿವಿಯ ಮೇಲೆ ಹಾಕಿಕೊಳ್ಳಲಿಲ್ಲ. ಈಗಲೂ ಅವರು ತಮ್ಮ ಪಕ್ಷದ ಹಿರಿಯ ಸಚಿವರ ಅಭಿಪ್ರಾಯಗಳಿಗೂ ಕಿವಿಗೊಡುತ್ತಿಲ್ಲ. ಇದೆಲ್ಲವನ್ನು ಗಮನಿಸಿದರೆ ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಡುವುದನ್ನು ಕಣ್ಣಾರೆ ಕಾಣಲು ನಿರ್ಧರಿಸಿದಂತೆ ಕಾಣುತ್ತದೆ ಎಂದು ಆರೋಪಿಸಿದ್ದಾರೆ.</p>.<p>ಈ ವಿಚಾರಗಳಲ್ಲಿ ಮರುಚಿಂತನೆ ನಡೆಯಬೇಕಾದ ಅಗತ್ಯವನ್ನು ಸರ್ಕಾರ ಮನಗಾಣಬೇಕಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಹಣ ತರಲಾಗದೆ, ಜನರಿಗೆ ಮುಖ ತೋರಿಸದಂತಹ ಸ್ಥಿತಿಯಲ್ಲಿ ಶಾಸಕರು ಇದ್ದಾರೆ. ರಾಜ್ಯದಲ್ಲಿ ಇಂತಹ ದಯನೀಯ ಸ್ಥಿತಿ ಎಂದೂ ಬಂದಿರಲಿಲ್ಲ. ಇದಕ್ಕೆ ನೇರವಾಗಿ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಅವರು ದೂರಿದ್ದಾರೆ.</p>.<p>ತುಂಗಭದ್ರಾ ಜಲಾಶಯದಲ್ಲಿ 19ನೇ ಗೇಟ್ ಕುಸಿದಿರುವುದು ನೋಡಿದರೆ ನೀರಾವರಿ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತದೆ. ರಾಜ್ಯದ ಎಲ್ಲ ಅಣೆಕಟ್ಟೆಗಳ ಸುರಕ್ಷತೆ ಬಗ್ಗೆ ಉನ್ನತ ಮಟ್ಟದಲ್ಲಿ ತಜ್ಞರಿಂದ ಅಧ್ಯಯನ ನಡೆಸುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>