<p><strong>ತುಮಕೂರು</strong>: ಅಪಘಾತದಲ್ಲಿ ಕೈ ಬೆರಳು ಕಳೆದುಕೊಂಡಿದ್ದ ವ್ಯಕ್ತಿಯೊಬ್ಬರಿಗೆ ಕಾಲಿನ ಬೆರಳು ಕತ್ತರಿಸಿ ಜೋಡಿಸುವಲ್ಲಿ ನಗರದ ಸಿದ್ಧಗಂಗಾ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.</p>.<p>ಕೆಲಸ ಮಾಡುವಾಗ ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ತಮ್ಮ ಬಲಗೈನ ಐದು ಬೆರಳಿಗೆ ಹಾನಿ ಮಾಡಿಕೊಂಡಿದ್ದರು. ಹೆಬ್ಬೆರಳು ಇಲ್ಲದೆ ಯಾವುದೇ ಕೆಲಸ ಮಾಡಲು, ವಸ್ತುಗಳನ್ನು ಹಿಡಿಯುವುದು ಕಷ್ಟಕರವಾಗಿತ್ತು. ಇದರಿಂದ ಅವರು ದೈನಂದಿನ ಕೆಲಸಗಳಿಗೂ ಪರದಾಡುವಂತಾಗಿತ್ತು.</p>.<p>ಇದನ್ನು ಸವಾಲಾಗಿ ಸ್ವೀಕರಿಸಿದ ವೈದ್ಯರ ತಂಡ ಸತತ 12 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಕಾಲಿನ ಬೆರಳು ತೆಗೆದು, ಬಲಗೈನ ಹೆಬ್ಬೆರಳಿಗೆ ಜೋಡಿಸುವಲ್ಲಿ ಯಶಸ್ವಿಯಾಗಿದೆ. ಪ್ಲಾಸ್ಟಿಕ್ ಸರ್ಜನ್ಗಳಾದ ಡಾ.ಕೆ.ಮಧುಸೂದನ್, ಡಾ.ಉದಯ್, ಅರಿವಳಿಕೆ ತಜ್ಞರಾದ ಡಾ.ಶಶಿಕಿರಣ್, ಡಾ.ನಾಗಭೂಷಣ್ ನೇತೃತ್ವದ ತಂಡ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.</p>.<p>ಸೂಕ್ಷ್ಮದರ್ಶಕ ಬಳಸಿ ಅತೀ ಸಣ್ಣ ರಕ್ತನಾಳಗಳು, ನರಗಳನ್ನು ಒಂದೊಂದಾಗಿ ಜೋಡಿಸುವ ಈ ಸಂಕೀರ್ಣ ಪ್ರಕ್ರಿಯೆಗೆ 12 ಗಂಟೆ ಸಮಯ ತೆಗೆದುಕೊಂಡಿತು. ಕೊನೆಗೂ ಯಶಸ್ಸುಕಂಡಿದೆ ಎಂದು ಡಾ.ಮಧುಸೂದನ್ <br>ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಅಪಘಾತದಲ್ಲಿ ಕೈ ಬೆರಳು ಕಳೆದುಕೊಂಡಿದ್ದ ವ್ಯಕ್ತಿಯೊಬ್ಬರಿಗೆ ಕಾಲಿನ ಬೆರಳು ಕತ್ತರಿಸಿ ಜೋಡಿಸುವಲ್ಲಿ ನಗರದ ಸಿದ್ಧಗಂಗಾ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.</p>.<p>ಕೆಲಸ ಮಾಡುವಾಗ ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ತಮ್ಮ ಬಲಗೈನ ಐದು ಬೆರಳಿಗೆ ಹಾನಿ ಮಾಡಿಕೊಂಡಿದ್ದರು. ಹೆಬ್ಬೆರಳು ಇಲ್ಲದೆ ಯಾವುದೇ ಕೆಲಸ ಮಾಡಲು, ವಸ್ತುಗಳನ್ನು ಹಿಡಿಯುವುದು ಕಷ್ಟಕರವಾಗಿತ್ತು. ಇದರಿಂದ ಅವರು ದೈನಂದಿನ ಕೆಲಸಗಳಿಗೂ ಪರದಾಡುವಂತಾಗಿತ್ತು.</p>.<p>ಇದನ್ನು ಸವಾಲಾಗಿ ಸ್ವೀಕರಿಸಿದ ವೈದ್ಯರ ತಂಡ ಸತತ 12 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಕಾಲಿನ ಬೆರಳು ತೆಗೆದು, ಬಲಗೈನ ಹೆಬ್ಬೆರಳಿಗೆ ಜೋಡಿಸುವಲ್ಲಿ ಯಶಸ್ವಿಯಾಗಿದೆ. ಪ್ಲಾಸ್ಟಿಕ್ ಸರ್ಜನ್ಗಳಾದ ಡಾ.ಕೆ.ಮಧುಸೂದನ್, ಡಾ.ಉದಯ್, ಅರಿವಳಿಕೆ ತಜ್ಞರಾದ ಡಾ.ಶಶಿಕಿರಣ್, ಡಾ.ನಾಗಭೂಷಣ್ ನೇತೃತ್ವದ ತಂಡ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.</p>.<p>ಸೂಕ್ಷ್ಮದರ್ಶಕ ಬಳಸಿ ಅತೀ ಸಣ್ಣ ರಕ್ತನಾಳಗಳು, ನರಗಳನ್ನು ಒಂದೊಂದಾಗಿ ಜೋಡಿಸುವ ಈ ಸಂಕೀರ್ಣ ಪ್ರಕ್ರಿಯೆಗೆ 12 ಗಂಟೆ ಸಮಯ ತೆಗೆದುಕೊಂಡಿತು. ಕೊನೆಗೂ ಯಶಸ್ಸುಕಂಡಿದೆ ಎಂದು ಡಾ.ಮಧುಸೂದನ್ <br>ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>