ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಕೆಮಿಕಲ್‌ ಕಾರ್ಖಾನೆಯಲ್ಲಿ ಅಗ್ನಿ ದುರಂತ

Published 15 ಸೆಪ್ಟೆಂಬರ್ 2023, 12:18 IST
Last Updated 15 ಸೆಪ್ಟೆಂಬರ್ 2023, 12:18 IST
ಅಕ್ಷರ ಗಾತ್ರ

ತುಮಕೂರು: ನಗರ ಹೊರ ವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೆಮಿಕಲ್‌ ಕಾರ್ಖಾನೆಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ.

ವೀರೇಶ್ ಇಂಡಸ್ಟ್ರೀಸ್‌ ಫಾರ್ಮಸಿಟಿಕಲ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರ್ಮಿಕರು ಕಾರ್ಖಾನೆಯಿಂದ ಹೊರ ಬಂದಿದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ. ಇದರಿಂದ ಯಾವುದೇ ರೀತಿಯ ಪ್ರಾಣ ಹಾನಿಯಾಗಿಲ್ಲ.

ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಸಂಜೆಯಾದರೂ ಬೆಂಕಿಯ ತೀವ್ರತೆ ಕಡಿಮೆಯಾಗಿರಲಿಲ್ಲ. ಸುಡುತ್ತಿರುವ ಕೆಮಿಕಲ್‌ಗೆ ನೀರು ಬಳಸಿದರೆ ಬೆಂಕಿ ಮತ್ತಷ್ಟು ಹೆಚ್ಚಾಗಬಹುದು ಎಂಬುವುದನ್ನು ಅರಿತ ಅಗ್ನಿ ಶಾಮಕ ದಳದ ಸಿಬ್ಬಂದಿ ಮಣ್ಣು ಮತ್ತು ಎಬಿಸಿ ಪೌಡರ್‌ ಮೂಲಕ ಬೆಂಕಿ ಆರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT