ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಟ್ಟದ ರೀತಿಯಲ್ಲಿ ಕಸದ ರಾಶಿ ಬಿದ್ದಿದ್ದು ಅದರ ವಿಲೇವಾರಿ ಸವಾಲಾಗಿದೆ. ನಿತ್ಯ ನಗರದಲ್ಲಿ ಸಂಗ್ರಹವಾದ ಕಸವನ್ನು ಘಟಕದಲ್ಲಿ ಸುರಿಯುತ್ತಿದ್ದು ಅದರ ವಿಲೇವಾರಿಗೆ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಕಸದ ರಾಶಿಯೇ ಬಿದ್ದಿದೆ. ಪ್ರತಿವರ್ಷ ಘಟಕ ನಿರ್ವಹಣೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ವಿಲೇವಾರಿ ಮಾಡಲು ನಗರಸಭೆ ಆಡಳಿತ ವಿಫಲವಾಗಿದೆ. ಕಸದ ಹೆಸರಿನಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.