ಥರಮನಕೋಟೆಯ ಡಿ.ಎಂ.ತಿಮ್ಮಯ್ಯ ಎಂಬುವವರಿಗೆ ಸೇರಿದ ತೆಂಗಿನ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ತೋಟದಲ್ಲಿದ್ದ ತೆಂಗಿನ ಮರ ಹಾಗೂ ಅಲ್ಲೇ ಇದ್ದ ಮನೆ ಭಸ್ಮಗೊಂಡಿದೆ. ಮನೆಯೊಳಗಿದ್ದ ಮರ ಮುಟ್ಟುಗಳು ಹಾಗೂ ಮನೆಯಲ್ಲಿದ್ದ ಧವಸ ಧಾನ್ಯಗಳು ಸೇರಿದಂತೆ ಎಲ್ಲ ವಸ್ತುಗಳು ಭಸ್ಮವಾಗಿದೆ. ತೋಟದ ಬಳಿಯೇ ದಾಸ್ತಾನು ಮಾಡಲಾಗಿದ್ದ ಸುಮಾರು ಮೂರು ಸಾವಿರ ತೆಂಗಿನ ಕಾಯಿಯೂ ಬೆಂಕಿಯ ಕೆನ್ನಾಲಿಗೆಗೆ ಸುಟ್ಟುಹೋಗಿವೆ.