ಮಾಯಣ್ಣ ಗೌಡರು ಹೇಳುವ ಪ್ರಕಾರ ‘ಈ ಘಟನೆಗೆ ಗ್ರಾಮ ಪಂಚಾಯಿತಿ ಚುನಾವಣೆಯ ದ್ವೇಷವೇ ಕಾರಣ. ನಾನು ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದೆ. ಇದನ್ನು ಸಹಿಸದ ಕೆಲವರು ಈ ಕೃತ್ಯ ಎಸಗಿದ್ದಾರೆ. ವೈಯಕ್ತಿಕವಾಗಿ ಯಾರ ಮೇಲೂ ದ್ವೇಷವಿಲ್ಲ. ರಾಜಕೀಯ ದ್ವೇಷಕ್ಕೆ ಈ ಕೃತ್ಯ ಎಸಗಿದ್ದಾರೆ. ಗ್ರಾಮಪಂಚಾಯಿತಿ ಚುನಾವಣೆಯೇ ಇದಕ್ಕೆಲ್ಲ ಕಾರಣವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.