ತೋಟಕ್ಕೆ ಬೆಂಕಿ: ಅಡಿಕೆ ನಾಶ

ಗುಬ್ಬಿ: ತಾಲ್ಲೂಕಿನ ಸಿ.ಎಸ್. ಪುರ ಹೋಬಳಿ ನೆಟ್ಟೆಕೆರೆಯ ರೈತ ಮಾಯಣ್ಣ ಗೌಡ ತಮ್ಮ ಜಮೀನಿನಲ್ಲಿ ಬೆಳೆಸಿದ್ದ ಮೂರು ವರ್ಷದ 300 ಅಡಿಕೆ ಗಿಡಗಳು ಬೆಂಕಿಗೆ ಆಹುತಿಯಾಗಿವೆ. ಬಾಳೆಗಿಡ ಹಾಗೂ ಹನಿ ನೀರಾವರಿ ಪೈಪ್ಗಳು ಸುಟ್ಟುಹೋಗಿವೆ. ಘಟನೆ ನಡೆದ ನಾಲ್ಕು ದಿನಗಳ ನಂತರ ಸಿಎಸ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಾಯಣ್ಣ ಗೌಡರು ಹೇಳುವ ಪ್ರಕಾರ ‘ಈ ಘಟನೆಗೆ ಗ್ರಾಮ ಪಂಚಾಯಿತಿ ಚುನಾವಣೆಯ ದ್ವೇಷವೇ ಕಾರಣ. ನಾನು ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದೆ. ಇದನ್ನು ಸಹಿಸದ ಕೆಲವರು ಈ ಕೃತ್ಯ ಎಸಗಿದ್ದಾರೆ. ವೈಯಕ್ತಿಕವಾಗಿ ಯಾರ ಮೇಲೂ ದ್ವೇಷವಿಲ್ಲ. ರಾಜಕೀಯ ದ್ವೇಷಕ್ಕೆ ಈ ಕೃತ್ಯ ಎಸಗಿದ್ದಾರೆ. ಗ್ರಾಮಪಂಚಾಯಿತಿ ಚುನಾವಣೆಯೇ ಇದಕ್ಕೆಲ್ಲ ಕಾರಣವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಈ ಬಗ್ಗೆ ಶೀಘ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.