ಕೊರೊನಾ ಬಂದಾಗಿನಿಂದ ಜೀವನ ನಡೆಸುವುದೇ ಕಷ್ಟವಾಗಿರುವ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಗುಡಿಸಲಿಗೆ ಬೆಂಕಿ ಹಚ್ಚಿ, ಭಯದ ವಾತಾವರಣ ಸೃಷ್ಟಿಸಿ, ಒಕ್ಕಲೆಬ್ಬಿಸುವ ಹುನ್ನಾರವನ್ನು ಕಿಡಿಗೇಡಿಗಳು ಮಾಡುತ್ತಿದ್ದಾರೆ. ಶೀಘ್ರವೇ ಜಿಲ್ಲಾಡಳಿತ, ಮಹಾನಗರ ಪಾಲಿಕೆ ನಮ್ಮನ್ನು ನಾಗರಿಕರಂತೆ ಕಂಡು, ಇಲ್ಲಿನ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಗುಡಿಸಲು ನಿವಾಸಿಗಳು ಹಾಗೂ ತುಮಕೂರು ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.