<p>ಕುಣಿಗಲ್: ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಪಘಾತದ ನೆಪದಲ್ಲಿ ರೌಡಿ ಶೀಟರ್ನನ್ನು ಸೋಮವಾರ ಸಂಜೆ ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು 48 ಗಂಟೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ತಾಲ್ಲೂಕಿನ ಬಾಗೇನಹಳ್ಳಿ ಗ್ರಾಮದ ರಾಮಚಂದ್ರ (29) ಅವರಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಸೋಮವಾರ ರಾತ್ರಿ ಮೃತಪಟ್ಟಿದ್ದರು. ಘಟನೆ ಬಗ್ಗೆ ಗ್ರಾಮಸ್ಥರು, ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು.</p>.<p>ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಕೊಲೆ ಎನ್ನುವುದು ತಿಳಿದುಬಂದಿದೆ.</p>.<p>ಕೊತ್ತಗೆರೆ ಹೋಬಳಿ ಕೊತ್ತಗೆರೆಪಾಳ್ಯದ ಶ್ರೀನಿವಾಸ, ಉಮೇಶ, ಬಿದನಗೆರೆ ಶಿವರಾಮು, ಚನ್ನಪ್ಪಗೌಡನ ಪಾಳ್ಯದ ಗುರುಮೂರ್ತಿ, ಸೊಬಾಗನಹಳ್ಳಿಯ ಲಕ್ಷ್ಮಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಈ ಹಿಂದೆ ಶಿವರಾಮು ಮತ್ತು ಶ್ರೀನಿವಾಸ ನಡುವೆ ಜಗಳವಾಗಿ ಚಾಕುವಿನಿಂದ ಇರಿಯಲಾಗಿದ್ದು, ಪ್ರಕರಣ ದಾಖಲಾಗಿತ್ತು. ದ್ವೇಷ ಮುಂದುವರೆದಿರುವುದು ಘಟನೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶ್ರೀನಿವಾಸ್ ಮತ್ತು ತಂಡ ಸೋಮವಾರ ಸಂಜೆ ಶಿವರಾಮು ಬೈಕ್ನಲ್ಲಿ ಸ್ವಗ್ರಾಮಕ್ಕೆ ಹೋಗುವಾಗ ಕಾರಿನಲ್ಲಿ ಹಿಂಬಾಲಿಸಿ ಬಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದರು.</p>.<p>ಡಿವೈಎಸ್ಪಿ ಓಂ ಪ್ರಕಾಶ್, ಸಿಪಿಐ ನವೀನ್ ಗೌಡ, ಮಾದ್ಯಾನಾಯಕ್, ಪಿಎಸ್ಐ ಕೃಷ್ಣಕುಮಾರ್, ಸಿಬ್ಬಂದಿ ನಟರಾಜು, ಯೋಗಿಶ್, ಹನುಮಂತರಾಜು, ಪ್ರಕಾಶ್, ಶ್ರೀಧರ್, ನಂದೀಶ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಪಘಾತದ ನೆಪದಲ್ಲಿ ರೌಡಿ ಶೀಟರ್ನನ್ನು ಸೋಮವಾರ ಸಂಜೆ ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು 48 ಗಂಟೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ತಾಲ್ಲೂಕಿನ ಬಾಗೇನಹಳ್ಳಿ ಗ್ರಾಮದ ರಾಮಚಂದ್ರ (29) ಅವರಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಸೋಮವಾರ ರಾತ್ರಿ ಮೃತಪಟ್ಟಿದ್ದರು. ಘಟನೆ ಬಗ್ಗೆ ಗ್ರಾಮಸ್ಥರು, ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು.</p>.<p>ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಕೊಲೆ ಎನ್ನುವುದು ತಿಳಿದುಬಂದಿದೆ.</p>.<p>ಕೊತ್ತಗೆರೆ ಹೋಬಳಿ ಕೊತ್ತಗೆರೆಪಾಳ್ಯದ ಶ್ರೀನಿವಾಸ, ಉಮೇಶ, ಬಿದನಗೆರೆ ಶಿವರಾಮು, ಚನ್ನಪ್ಪಗೌಡನ ಪಾಳ್ಯದ ಗುರುಮೂರ್ತಿ, ಸೊಬಾಗನಹಳ್ಳಿಯ ಲಕ್ಷ್ಮಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಈ ಹಿಂದೆ ಶಿವರಾಮು ಮತ್ತು ಶ್ರೀನಿವಾಸ ನಡುವೆ ಜಗಳವಾಗಿ ಚಾಕುವಿನಿಂದ ಇರಿಯಲಾಗಿದ್ದು, ಪ್ರಕರಣ ದಾಖಲಾಗಿತ್ತು. ದ್ವೇಷ ಮುಂದುವರೆದಿರುವುದು ಘಟನೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶ್ರೀನಿವಾಸ್ ಮತ್ತು ತಂಡ ಸೋಮವಾರ ಸಂಜೆ ಶಿವರಾಮು ಬೈಕ್ನಲ್ಲಿ ಸ್ವಗ್ರಾಮಕ್ಕೆ ಹೋಗುವಾಗ ಕಾರಿನಲ್ಲಿ ಹಿಂಬಾಲಿಸಿ ಬಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದರು.</p>.<p>ಡಿವೈಎಸ್ಪಿ ಓಂ ಪ್ರಕಾಶ್, ಸಿಪಿಐ ನವೀನ್ ಗೌಡ, ಮಾದ್ಯಾನಾಯಕ್, ಪಿಎಸ್ಐ ಕೃಷ್ಣಕುಮಾರ್, ಸಿಬ್ಬಂದಿ ನಟರಾಜು, ಯೋಗಿಶ್, ಹನುಮಂತರಾಜು, ಪ್ರಕಾಶ್, ಶ್ರೀಧರ್, ನಂದೀಶ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>