ಕುಣಿಗಲ್: ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೆರೆ ಬಳಿ ಟ್ರಾಕ್ಟರ್ಗೆ ಕಾರು ಡಿಕ್ಕಿ ಹೊಡೆದು ಗುರುವಾರ ರಾತ್ರಿ ಐವರು ಮೃತಪಟ್ಟಿದ್ದಾರೆ.
ಮೃತರನ್ನು ಕಲ್ಲಹಳ್ಳಿಯ ಕಿರಣ್ (24), ಮಧು (24), ಮೋಹನ್ (22), ರಾಜಣ್ಣ (50) ಮತ್ತು ರಂಗಸ್ವಾಮಿ (58) ಮೃತರು ಎಂದು ಗುರುತಿಸಲಾಗಿದೆ. ವೆಂಕಟೇಶ್ ಎಂಬುವವರು ತೀವ್ರ ಗಾಯಗೊಂಡಿದ್ದಾರೆ.
ರಂಗಸ್ವಾಮಿ ಅವರ ಆರೋಗ್ಯ ಸರಿ ಇಲ್ಲದ ಕಾರಣ ಚುಂಚನಗಿರಿ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ದಿದ್ದರು. ಸ್ವಗ್ರಾಮಕ್ಕೆ ಹಿಂತಿರುಗುವಾಗ ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮೃತರ ದೇಹಗಳು ಕಾರಿನೊಂದಿಗೆ ಜಜ್ಜಿ ಹೋಗಿವೆ. ಪೊಲೀಸರು ಜೆಸಿಬಿ ಬಳಸಿ ಶವಗಳನ್ನು ಪ್ರಯಾಸದಿಂದ ಹೊರತೆಗೆದಿದ್ದಾರೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.