ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಾಕ್ಟರ್‌ಗೆ ಕಾರು ಡಿಕ್ಕಿ; ಐವರ ದುರ್ಮರಣ

Last Updated 25 ಅಕ್ಟೋಬರ್ 2019, 10:41 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೆರೆ ಬಳಿ ಟ್ರಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದು ಗುರುವಾರ ರಾತ್ರಿ ಐವರು ಮೃತಪಟ್ಟಿದ್ದಾರೆ.

ಮೃತರನ್ನು ಕಲ್ಲಹಳ್ಳಿಯ ಕಿರಣ್ (24), ಮಧು (24), ಮೋಹನ್ (22), ರಾಜಣ್ಣ (50) ಮತ್ತು ರಂಗಸ್ವಾಮಿ (58) ಮೃತರು ಎಂದು ಗುರುತಿಸಲಾಗಿದೆ. ವೆಂಕಟೇಶ್ ಎಂಬುವವರು ತೀವ್ರ ಗಾಯಗೊಂಡಿದ್ದಾರೆ.

ರಂಗಸ್ವಾಮಿ ಅವರ ಆರೋಗ್ಯ ಸರಿ ಇಲ್ಲದ ಕಾರಣ ಚುಂಚನಗಿರಿ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ದಿದ್ದರು. ಸ್ವಗ್ರಾಮಕ್ಕೆ ಹಿಂತಿರುಗುವಾಗ ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಮೃತರ ದೇಹಗಳು ಕಾರಿನೊಂದಿಗೆ ಜಜ್ಜಿ ಹೋಗಿವೆ. ಪೊಲೀಸರು ಜೆಸಿಬಿ ಬಳಸಿ ಶವಗಳನ್ನು ಪ್ರಯಾಸದಿಂದ ಹೊರತೆಗೆದಿದ್ದಾರೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT