ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆಗೆ ಐವರ ನಾಮಕರಣ

Last Updated 20 ನವೆಂಬರ್ 2020, 1:54 IST
ಅಕ್ಷರ ಗಾತ್ರ

ತುಮಕೂರು: ಮಹಾನಗರ ಪಾಲಿಕೆ ಸದಸ್ಯರಾಗಿ ಐವರು ನಾಮಕರಣಗೊಂಡಿದ್ದು, ಅವರಿಗೆ ಸ್ವಾಗತ ಕೋರಲಾಯಿತು.

ನೂತನ ನಾಮನಿರ್ದೇಶಿತ ಸದಸ್ಯರಾದ ಡಿ.ಎ. ಮೋಹನ್, ಕೆ.ಎನ್. ಶಿವರಾಜು, ನರಸಿಂಹಸ್ವಾಮಿ, ತ್ಯಾಗರಾಜಸ್ವಾಮಿ, ವಿಶ್ವನಾಥ್ ಅವರನ್ನು ಶಾಸಕ ಜ್ಯೋತಿಗಣೇಶ್ ಸ್ವಾಗತಿಸಿದರು.

‘ನಗರದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು. ಚುನಾಯಿತ ಸದಸ್ಯರ ಜತೆಗೆ ಜಿದ್ದಿಗೆ ಬೀಳದೆ, ಅವರಿಗೆ ಪೂರಕವಾಗಿ ಕೆಲಸ ಮಾಡುವ ಮೂಲಕ ನಗರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರ ನೀಡಬೇಕು’ ಎಂದು ಸಲಹೆ ಮಾಡಿದರು.

ಕಳೆದ 45 ದಿನಗಳ ಹಿಂದೆಯೇ ಸರ್ಕಾರ ಸದಸ್ಯರನ್ನು ನೇಮಕ ಮಾಡಿತ್ತು. ಆದರೆ, ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ನಗರಪಾಲಿಕೆಗೆ ಪರಿಚಯಿಸಲು ಸಾಧ್ಯವಾಗಿರಲಿಲ್ಲ ಎಂದರು.

ಮೇಯರ್ ಫರೀದಾ ಬೇಗಂ, ಪಾಲಿಕೆ ಆಯುಕ್ತೆ ರೇಣುಕಾ, ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನಯ್ಯ, ಟಿ.ಜಿ. ಕೃಷ್ಣಪ್ಪ, ರಮೇಶ್, ವಿಷ್ಣುವರ್ಧನ್, ಮಂಜುನಾಥ್, ಗಿರಿಜಾ, ಮಂಜುಳಾ ಆದರ್ಶ, ನಿರ್ಮಲಾ ಶಿವಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT