ಸ್ಥಳಕ್ಕೆ ಬಂದ ಕುಣಿಗಲ್ ಡಿವೈಎಸ್ಪಿ ಜಗದೀಶ್, ಎರಡು ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದರು. ತಿಪಟೂರು ಡಿವೈಎಸ್ಪಿ ಸೇರಿದಂತೆ ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದರೂ ಶಾಸಕ ಮಸಾಲ ಜಯರಾಂ ದೂರದ ಅಂಗಡಿಯೊಂದರ ಮುಂದೆ ನಿಂತು ಪರಿಸ್ಥಿತಿ ಅವಲೋಕಿಸಿದರು.