ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ: ಸಿದ್ಧಗಂಗಾಮಠದಿಂದ ₹ 50 ಲಕ್ಷ ಪರಿಹಾರ

Last Updated 11 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ತುಮಕೂರು: ನೆರೆ ಸಂತ್ರಸ್ತರಿಗೆ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯಿಂದ ₹ 25 ಲಕ್ಷ, ಸಿದ್ಧಗಂಗಾಮಠದವತಿಯಿಂದ ₹ 25 ಲಕ್ಷ ಸೇರಿದಂತೆ ಒಟ್ಟು ₹ 50 ಲಕ್ಷ ಮೊತ್ತ ಪರಿಹಾರ ನೀಡಲಾಗುತ್ತಿದೆ ಎಂದು ಸಿದ್ಧಗಂಗಾಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

ಸಂಜೆ ಮಠದ ಆವರಣದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ವೇಳೆ ಸ್ವಾಮೀಜಿ ಈ ಪರಿಹಾರ ಮೊತ್ತದ ಬಗ್ಗೆ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಎಲ್ಲ ಕಡೆ ನೆರೆಗೆ ಜನರು ತುತ್ತಾಗಿದ್ದಾರೆ. ಇಂತಹ ಸಂಕಷ್ಟ ಸ್ಥಿತಿಯಲ್ಲಿ ಅವರ ನೆರವಿಗೆ ಧಾವಿಸುವುದು ಎಲ್ಲರ ಕರ್ತವ್ಯವಾಗಿದೆ. ಈ ಹಿಂದೆ 2009ರಲ್ಲೂ ಪ್ರವಾಹ ಆದಾಗ ಸಂತ್ರಸ್ತರಿಗೆ ಮನೆಗಳನ್ನು ಕಟ್ಟಿಸಿಕೊಡಲಾಗಿತ್ತು. ಈ ಬಾರಿಯೂ ಮಠ ನೆರವಿಗೆ ಧಾವಿಸುತ್ತಿದೆ ಎಂದು ಸಿದ್ದಲಿಂಗ ಸ್ವಾಮೀಜಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT