<p><strong>ತುಮಕೂರು:</strong> ತಾಲ್ಲೂಕಿನ ಬೆಳ್ಳಾವಿಯಲ್ಲಿ ಸೋಮವಾರ ಮೇವು ಬ್ಯಾಂಕ್ ಆರಂಭಿಸಿದ್ದು, ಒಂದೇ ದಿನದಲ್ಲಿ ರೈತರಿಗೆ 5.48 ಟನ್ ಮೇವು ವಿತರಣೆ ಮಾಡಲಾಗಿದೆ.</p>.<p>ಬೆಳ್ಳಾವಿಯ ಕುವೆಂಪು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೇವು ಬ್ಯಾಂಕ್ ತೆರೆಯಲಾಗಿದೆ. ಮೇವಿನ ವಿತರಣಾ ಕಾರ್ಡು ಪಡೆದುಕೊಂಡವರು ಮೇವು ಬ್ಯಾಂಕಿಗೆ ಭೇಟಿ ನೀಡಿ ಪ್ರತಿ ಕೆ.ಜಿಗೆ ₹2 ಪಾವತಿಸಿ ಪಡೆಯಬಹುದಾಗಿದೆ.</p>.<p>ಪ್ರತಿ ಜಾನುವಾರಿಗೆ ಪ್ರತಿ ದಿನಕ್ಕೆ 6 ಕೆ.ಜಿಯಂತೆ 7 ದಿನಗಳಿಗೆ 42 ಕೆ.ಜಿ ವಿತರಿಸಲಾಗುತ್ತಿದೆ. ಜಾನುವಾರುಗಳಿಗೆ ಮೇವಿನ ಅವಶ್ಯಕತೆ ಇದ್ದವರು, ನೀರಾವರಿ ಸೌಲಭ್ಯ ಇಲ್ಲದ ರೈತರಿಗೆ ಮಾತ್ರ ವಿತರಣೆ ಮಾಡಲಾಗುತ್ತಿದೆ.</p>.<p>ಬೆಳ್ಳಾವಿ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 7 ಸಾವಿರ ಜಾನುವಾರುಗಳಿದ್ದು, ಪ್ರತಿ ದಿನ 10 ಟನ್ ಮೇವು ವಿತರಿಸುವ ಗುರಿ ಹೊಂದಲಾಗಿದೆ. ಈಗಾಗಲೇ 184 ರೈತರು ಮೇವು ವಿತರಣಾ ಕಾರ್ಡು ಪಡೆದುಕೊಂಡಿದ್ದಾರೆ.</p>.<p>ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ತಾ.ಪಂ ಇಒ ಹರ್ಷಕುಮಾರ್, ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ.ಗಿರೀಶ್ಬಾಬು ರೆಡ್ಡಿ, ಸಹಾಯಕ ನಿರ್ದೇಶಕ ಡಾ.ಕಾಂತರಾಜು, ಡಾ.ರುದ್ರಪ್ರಸಾದ್, ಮಲ್ಲೇಶಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಾಲ್ಲೂಕಿನ ಬೆಳ್ಳಾವಿಯಲ್ಲಿ ಸೋಮವಾರ ಮೇವು ಬ್ಯಾಂಕ್ ಆರಂಭಿಸಿದ್ದು, ಒಂದೇ ದಿನದಲ್ಲಿ ರೈತರಿಗೆ 5.48 ಟನ್ ಮೇವು ವಿತರಣೆ ಮಾಡಲಾಗಿದೆ.</p>.<p>ಬೆಳ್ಳಾವಿಯ ಕುವೆಂಪು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೇವು ಬ್ಯಾಂಕ್ ತೆರೆಯಲಾಗಿದೆ. ಮೇವಿನ ವಿತರಣಾ ಕಾರ್ಡು ಪಡೆದುಕೊಂಡವರು ಮೇವು ಬ್ಯಾಂಕಿಗೆ ಭೇಟಿ ನೀಡಿ ಪ್ರತಿ ಕೆ.ಜಿಗೆ ₹2 ಪಾವತಿಸಿ ಪಡೆಯಬಹುದಾಗಿದೆ.</p>.<p>ಪ್ರತಿ ಜಾನುವಾರಿಗೆ ಪ್ರತಿ ದಿನಕ್ಕೆ 6 ಕೆ.ಜಿಯಂತೆ 7 ದಿನಗಳಿಗೆ 42 ಕೆ.ಜಿ ವಿತರಿಸಲಾಗುತ್ತಿದೆ. ಜಾನುವಾರುಗಳಿಗೆ ಮೇವಿನ ಅವಶ್ಯಕತೆ ಇದ್ದವರು, ನೀರಾವರಿ ಸೌಲಭ್ಯ ಇಲ್ಲದ ರೈತರಿಗೆ ಮಾತ್ರ ವಿತರಣೆ ಮಾಡಲಾಗುತ್ತಿದೆ.</p>.<p>ಬೆಳ್ಳಾವಿ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 7 ಸಾವಿರ ಜಾನುವಾರುಗಳಿದ್ದು, ಪ್ರತಿ ದಿನ 10 ಟನ್ ಮೇವು ವಿತರಿಸುವ ಗುರಿ ಹೊಂದಲಾಗಿದೆ. ಈಗಾಗಲೇ 184 ರೈತರು ಮೇವು ವಿತರಣಾ ಕಾರ್ಡು ಪಡೆದುಕೊಂಡಿದ್ದಾರೆ.</p>.<p>ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ತಾ.ಪಂ ಇಒ ಹರ್ಷಕುಮಾರ್, ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ.ಗಿರೀಶ್ಬಾಬು ರೆಡ್ಡಿ, ಸಹಾಯಕ ನಿರ್ದೇಶಕ ಡಾ.ಕಾಂತರಾಜು, ಡಾ.ರುದ್ರಪ್ರಸಾದ್, ಮಲ್ಲೇಶಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>